ಕಲ್ಯಾಣಸಿರಿ ವಿಶೇಷ

ತೆರಿಗೆಪಾವತಿಮಾಡದಿದ್ದವರ ಸ್ವತ್ತುಗಳ ಜಪ್ತಿ ಹರಾಜು ಪ್ರಕ್ರಿಯೇ,,

Auction process of confiscation of assets of non-tax payers.

ಕುಕನೂರು : ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಸತಿ, ವಾಣಿಜ್ಯ ಕೈಗಾರಿಕೆ ಹಾಗೂ ಇನ್ನಿತರೇ ಆಸ್ತಿ ತೆರಿಗೆ ಕಟ್ಟದೇ ಇರುವ ಆಸ್ತಿ ಮಾಲೀಕರ ಚರ ಸ್ವತ್ತುಗಳ ಜಪ್ತಿ, ಹಾಗೂ ಹರಾಜು ಪ್ರಕ್ರಿಯೇ ಕೈಗೊಂಡು ತೆರಿಗೆ ವಸೂಲಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ಅಧಿನಿಯಮ 1993ರ ಪ್ರಕರಣ 200ರನ್ವಯ ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ತಾಲೂಕ ಪಂಚಾಯತ ಕುಕನೂರು ಹಾಗೂ ಗ್ರಾಮ ಪಂಚಾಯತಿಗಳು ಸೇರಿ ಪೋಲಿಸ್ ಇಲಾಖೆಯ ಸಹಕಾರದೊಂದಿಗೆ ತೆರಿಗೆ ಹಣ ಪಾವತಿ ಮಾಡದವರ ಆಸ್ತಿ ಮಾಲೀಕರ ಚರ ಸ್ವತ್ತುಗಳ ಜಪ್ತಿ, ಹಾಗೂ ಹರಾಜು ಪ್ರಕ್ರಿಯೇ ಕೈಗೊಂಡು ತೆರಿಗೆ ವಸೂಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕುಕನೂರಿನಲ್ಲಿ ಸುಮಾರು 100 ವಾಣಿಜ್ಯ ಉದ್ದೇಶಿತ ಆಸ್ತಿಗಳು, ಕೈಗಾರಿಕೆಗಳು ತೆರಿಗೆ ಪಾವತಿ ಮಾಡಿರುವುದಿಲ್ಲಾ, ಸುಮಾರು 1500ಮನೆಗಳು, ವಸತಿ ಉದ್ದೇಶಿತ ಆಸ್ತಿಗಳು 3-4 ವರ್ಷಗಳಿಂದ ತೆರಿಗೆ ಪಾವತಿ ಮಾಡಿರುವುದಿಲ್ಲಾ, ಅಂತಹ ಆಸ್ತಿಗಳ ಮಾಲಿಕರುತಕ್ಷಣವೇ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ನಿಗದಿತ ಪಾವತಿ ತೆರಿಗೆ ಪಾವತಿ ಮಾಡಿ ರಸೀದಿ ಪಡೆಯಲು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ತಪ್ಪಿದಲ್ಲಿ ನಿಯಮಾನುಸಾರ ಅಂತವರ ಚರಾಸ್ತಿಗಳ ಜಪ್ತಿ ಮಾಡುವ ಮತ್ತು ಹರಾಜು ಮಾಡುವ ಮೂಲಕ ತೆರಿಗೆ ವಸೂಲಾತಿಗೆ ಕಾರ್ಯನಿರತರಾಗಲಾಗುವುದು ಎಂದು ಕುಕನೂರು ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago