ಜನಸಂಖ್ಯೆಯ ಆಧಾರದದಲ್ಲಿ ಪರಿಶಿಷ್ಟ ಜಾತಿಗಳಒಳಮಿಸಲಾತಿಯನ್ನು ಜಾರಿಗೊಳಿಸಲು ಸರ್ಕಾರವನ್ನುಆಗ್ರಹಿಸಿದ: ನಂಜುಂಡ ಮೌರ್ಯ

Urges Govt to implement population-based inclusion of Scheduled Castes: Nanjunda Maurya


ವರದಿ:ಬಂಗಾರಪ್ಪ ಸಿ .
ಹನೂರು: ನಮ್ಮ ದೇಶದಲ್ಲಿ
ಪರಿಶಿಷ್ಟ ಜಾತಿಗಳ ಜನಸಂಖ್ಯೆ ಆಧಾರದ ಮೇಲೆ ಒಳಮಿಸಲಾತಿ ಜಾರಿಗಾಗಿ ನಾವು ಸತತವಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮನ್ನು ಆಳುವ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಇತರ ಯಾವುದೇ ಸರ್ಕಾರಗಳು ಇದುವರೆಗೂ ಸಾಮಾಜಿಕ ನ್ಯಾಯವನ್ನು ನೀಡಿಲ್ಲ ಎಂದು ದಲಿತ ಜಿಲ್ಲಾ ಸಂಚಾಲಕರು ಮಂಡ್ಯ ಹಾಗೂ ಕರ್ನಾಟಕ ಮಾದಿಗರ ಸಂಸ್ಕೃತಿ ಸಂಘದ ಅಧ್ಯಕ್ಷರಾದ ನಂಜುಂಡ ಮೌರ್ಯ ತಿಳಿಸಿದರು.
ಹನೂರು ಪಟ್ಟಣದ
ಕರ್ನಾಟಕ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ನೂರಾರು ವರ್ಷಗಳಿಂದ ತುಳಿತಕ್ಕೆ ಒಳಗಾಗಿರುವ ಪರಿಶಿಷ್ಟ ಜಾತಿ ವಿಶೇಷವಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮ ಬಾಳು, ಸಾಮಾಜಿಕ ನ್ಯಾಯ ನೀಡಬೇಕೆಂದು ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ರವರು ತಿಳಿಸಿದ್ದಾರೆ, ಅವರ ಆಶಯದಂತೆ ಎಲ್ಲರಿಗೂ ನ್ಯಾಯ ಸಿಗಬೇಕು ಎಂದು ನಾವು ಸುಮಾರು 30 ವರ್ಷಗಳಿಂದ ಕರ್ನಾಟಕ ದಲಿತ ಸಂಘದ ಸಮಿತಿಯು ಹೋರಾಟವನ್ನು ಮಾಡಿಕೊಂಡಿದ್ದೇವೆ. ಅಧಿವೇಶನದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಯನ್ನು ಜಾರಿಗೊಳಿಸುತ್ತೇವೆ ಎಂದು ಸನ್ಮಾನ್ಯ ಸಿದ್ದರಾಮಯ್ಯನವರು ಹೇಳಿದ್ದರು. ಆದರೆ ಅವರು ಯಾವುದೇ ರೀತಿಯ ಒಳ ಮೀಸಲಾತಿಯನ್ನು ನಮಗೆ ನೀಡಿಲ್ಲ. ಆಗಸ್ಟ್ 1 2024ರಂದು ಸುಪ್ರೀಂ ಕೋರ್ಟ್ ತಮ್ಮ ತೀರ್ಪಿನಲ್ಲಿ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರವನ್ನು ನೀಡಿತ್ತು. ಆದರೆ ಮೀಸಲಾತಿಯನ್ನು ನೀಡದಿರುವುದು ಶೋಚನೆಯ ಸಂಗತಿಯಾಗಿದೆ. ಅಸ್ಪೃಶ್ಯರ ಒಳ ಮೀಸಲಾತಿಯ ಹೋರಾಟಕ್ಕೆ ಹುಟ್ಟಿಕೊಂಡಂತಹ ಸಂಘಟನೆಗಳು ಇನ್ನು ಮುಂದೆ ಕಾಂಗ್ರೆಸ್ ಹಾಗೂ ಬಿಜೆಪಿ ಎದುರು ವಿಧಾನಸಭೆ, ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ನಮ್ಮ ಒಗ್ಗಟ್ಟನ್ನು ಪ್ರದರ್ಶನ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಡಾ ಬಾಬು ಜಗಜೀವನ್ ರಾವ್ ಸಂಘದ ಜಿಲ್ಲಾಧ್ಯಕ್ಷ ಸಿದ್ದರಾಜು, ಶ್ರೀರಂಗಪಟ್ಟಣ ತಾಲ್ಲೂಕಿನ ಸಂಘದ ಅಧ್ಯಕ್ಷರಾದ ಶಂಕರ್, ಹನೂರು ತಾಲೂಕಿನ ಡಾ. ಬಾಬು ಜಗಜೀವನ್ ರಾವ್ ಸಂಘದ ಅಧ್ಯಕ್ಷರಾದ ಅಂಬರೀಶ್, ಹಾಗೂ ಮುಖಂಡರಾದ ರಮೇಶ್ ರಾಜು ರಂಗನಾಥ್ ಮಾಣಿಕ್ಯ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago