ಕಲ್ಯಾಣಸಿರಿ ವಿಶೇಷ

ಜಾಫ್ನಾ ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವ: ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿಗೆ ಜೀವಮಾನದ ವಿಶೇಷ ಸಾಧನೆ ಪ್ರಶಸ್ತಿ ಗೌರವ

Jaffna International Film Festival: Distinguished Director Girish Kasaravalli honored with Lifetime Achievement Award

ಶ್ರೀಲಂಕಾ: ಸೆ.23: ಪ್ರಸಿದ್ಧ ಭಾರತೀಯ ಚಲನಚಿತ್ರ ನಿರ್ದೇಶಕ ಮತ್ತು ರಾಷ್ಟ್ರಪ್ರಶಸ್ತಿ ವಿಜೇತರಾದ ಪದ್ಮಶ್ರೀ ಪುರಸ್ಕೃತ ಗಿರೀಶ್ ಕಾಸರವಳ್ಳಿ ಅವರಿಗೆ ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಜಾಫ್ನಾ ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವದ 10ನೇ ಆವೃತ್ತಿಯಲ್ಲಿ ವಿಶೇಷ ಜೀವಮಾನದ ಸಾಧನೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಯನ್ನು ಉತ್ಸವದ ನಿರ್ದೇಶಕ ಅನೋಮಾ ರಾಜಕಾರುಣಾ ಅವರು ಜಾಫ್ನಾ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ನೀಡಿದರು.

ಕಾಸರವಳ್ಳಿ ಅವರು ಭಾರತೀಯ ಚಲನಚಿತ್ರಕ್ಕೆ ನೀಡಿದ ವಿಶೇದ ಕೊಡುಗೆಗಾಗಿ 14 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅದರಲ್ಲಿನ ಪ್ರಮುಖ ಚಿತ್ರಗಳು ಘಟಶ್ರದ್ಧ, ತಬರನ ಕತೆ, ತಾಯಿಸಾಹೇಬಾ, ಮತ್ತು ದ್ವೀಪ ಸೇರಿವೆ. ಇನ್ನು ಈ ಉತ್ಸವದಲ್ಲಿ 18 ದೇಶಗಳ 60 ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಸ್ ವಿಸಿಸಿ ಹಾಗೂ ಭಾರತೀಯ ರಾಯಭಾರಿ ಕಚೇರಿ, ಪ್ರತೀ ವರ್ಷ ಈ ಚಿತ್ರೋತ್ಸವವನ್ನು ಆಯೋಜಿಸುತ್ತಿದ್ದು ಪ್ರಪಂಚದಾದ್ಯಂತ ಸಾಮಾಜಿಕ ಸಂದೇಶ, ಸಾಂಸೃತಿಕ, ವಿಶೇಷ ಮನ್ನಣೆ ಪಡೆದ ಚಲನಚಿತ್ರಗಳನ್ನು ಬೆಂಬಲಿಸುವ ಕೆಲಸ ಮಾಡುತ್ತಿದೆ ಎಂದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago