ಕೊಪ್ಪಳ : ಕುಕನೂರು ತಾಲೂಕು ಬಳಗೇರಿ ಗ್ರಾಮದ ಮರಳು ಪಾಯಿಂಟ್ ನಿಂದ ಮರುಳು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಒಂದು ಬಳಗೇರಿ ಹಳ್ಳದ ಮೇಲೆ ಬರುತ್ತಿದ್ದ ಸಂದರ್ಭದಲ್ಲಿ ಪಲ್ಟಿಯಾದ ಘಟನೆ ಮಂಗಳವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜರುಗಿದೆ ಎನ್ನಲಾಗಿದೆ.
ಬಳಗೇರಿಯ ಹಳ್ಳದ ಬಳಿ ಇರುವ ಮರುಳು ಪಾಯಿಂಟ್ ನಿಂದ 12ಟನ್ ಮರುಳು ತುಂಬಿದ ಟಿಪ್ಪರ ಬಳಗೇರಿಯಿಂದ ಹಿರೇವಂಕಲಕುಂಟಕ್ಕೆ ಹೋಗುತ್ತಿದ್ದ ವೇಳೆ ಹಳ್ಳದ ಮೇಲೆ ಹೋಗುವ ಸಂದರ್ಭದಲ್ಲಿ ಹಳ್ಳ ಕುಸಿದದರಿಂದ ಟಿಪ್ಪರ್ ಪಲ್ಟಿಯಾಗಿ ಬುಡ ಮೇಲಾಗಿ ಬಿದಿದ್ದು, ಚಾಲಕ ನೀಲಪ್ಪನ ಕಾಲು ಮುರಿದಿದ್ದು, ಯಾವುದೇ ಗಂಭೀರ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಟಿಪ್ಪರ್ ಚಾಲಕ ನೀಲಪ್ಪ ಮಲ್ಲಪ್ಪ ಹಿರ್ಯಾಳ ಆಗಿದ್ದು, ಟಿಪ್ಪರ್ ಇಲಕಲ್ ನ ಮಹಾಂತೇಶ ಪಾಟೀಲ್ ಎನ್ನುವವರಿಗೆ ಸೇರಿದ ವಾಹನ ಜಖಂಗೊಡಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರ ಮಾಹಿತಿ ನೀಡುತ್ತಿದ್ದಂತೆ ಘಟನಾ ಸ್ಥಳಕ್ಕೆ 108 ದೌಡಾಯಿಸಿ ಕುಕನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಾಲಕನನ್ನು ದಾಖಲಿಸಲಾಗಿದ್ದು, ಈ ಕುರಿತಂತೆ ಕುಕನೂರು ಠಾಣೆಯವರು ಆಸ್ಪತ್ರೆಗೆ ಭೇಟಿ ನೀಡಿದರು ಎಂದು ತಿಳಿದು ಬಂದಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…