ಕಲ್ಯಾಣಸಿರಿ ವಿಶೇಷ

ಸರ್ಕಾರದಿಂದ ಪಿ ಆರ್ ಕಾರ್ಡ್ ನೀಡುತ್ತಿದ್ದು ರೈತರುಸದುಪಯೋಗಪಡಿಸಿಕೊಳ್ಳಲು ಶಾಸಕರಾದ ಎಮ್ ಆರ್ ಮಂಜುನಾಥ್ ಮನವಿ.

MLA MR Manjunath requested farmers to make use of the PR card issued by the government.


ವರದಿ : ಬಂಗಾರಪ್ಪ ,ಸಿ ,
ಹನೂರು :-ಕ್ಷೇತ್ರ ವ್ಯಾಪ್ತಿಯಲ್ಲಿನ ಗ್ರಾಮೀಣ ಭಾಗದಲ್ಲಿ ಜಾಗದ ಅಳತೆ ನಡೆಸಿ ಪಿಆರ್ ಕಾರ್ಡ್ ನೀಡುತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯ್ತಿ ಆವರಣ ಆಯೋಜಿಸಿದ್ದ ಸ್ವಾಮಿತ್ವ ಯೋಜನೆಯ ಗ್ರಾಮ ಸಭೆಯನ್ನು ಗಿಡಕ್ಕೆ ನೀರೆರೇಯುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಈ ಸ್ವತ್ತುಗಳ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮೀಣ ಭಾಗದ ವಸತಿ ಪ್ರದೇಶಗಳಿಗೆ ಡ್ರೋನ್ ಅಥವಾ ಯುಎವಿ ತಂತ್ರಜ್ಞಾನದ ಮೂಲಕ ಸರ್ವೇ ನಡೆಸಿ ಡ್ರೋನ್ ಮುಖಾಂತರ ನಿಮ್ಮ ಜಾಗದ ಅಳತೆಯನ್ನು ನಡೆಸಿ ಪಿಆರ್ ಕಾರ್ಡ್ ನೀಡಲಾಗುತ್ತದೆ.
ಇದರಿಂದ ಜನರಿಗೆ ಅನುಕೂಲವಾಗಲಿದೆ. ಮತ್ತು ಇ ಸ್ವತ್ತು ಆಸ್ತಿಗೆ ಸಂಬಂಧಿಸಿದಂತೆ ದೋಷ ಮುಕ್ತ ದಾಖಲೆ ಸೃಷ್ಟಿಸುವುದರಿಂದ ಸರಕಾರಿ ಸೌಲಭ್ಯ ಪಡೆಯಲು ಮತ್ತು ಸಾಲ ಇನ್ನಿತರ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಅಲ್ಲದೆ ತಾಲೂಕಿನ ಉಡುತೊರೆ ಜಲಾಶಯದ ವ್ಯಾಪ್ತಿಗೆ ಬರುವ ಕಾಲುವೆಗಳ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಅಜ್ಜೀಪುರ ಬಸಪ್ಪನ ದೊಡ್ಡಿ ಗ್ರಾಮಗಳಲ್ಲಿ ಚಾಲನೆ ನೀಡಿದ ಶಾಸಕರು ಜಲಾಶಯ ಕಾಲುವೆಗಳ ಹೂಳು ತೆಗೆದು ಡಿಸ್ಟ್ರಿಬ್ಯೂಟರ್ ಗಳು ರಿಪೇರಿ ಇದ್ದಲ್ಲಿ ಅದನ್ನು ದುರಸ್ತಿ ಪಡಿಸಿ ರೈತರಿಗೆ ಜಲಾಶಯದ ನೀರು ಉಪಯೋಗ ಆಗಬೇಕು. ಇದರಿಂದ ಮುಂದಿನ ದಿನಗಳಲ್ಲಿ ಅಂತರ್ಜಲ ಹೆಚ್ಚಾಳ ಆಗುವುದರಿಂದ ರೈತರು ಸಾರ್ವಜನಿಕರಿಗೆ
ಅನುಕೂಲ ವಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ
ತಹಸಿಲ್ದಾರ್ ಗುರುಪ್ರಸಾದ್ ತಾ.ಪಂ. ಉಮೇಶ್ ಎಡಿಎಲ್ಆರ್ ವಿಧ್ಯಾರಾಣಿ ನಟರಾಜು ಸರ್ವೆ ಸೂಪರ್ವೈಸರ್ ಭಾನುರೇಖಾ ಪಿಡಿಓಗಳಾದ ನಂದೀಶ್ ಮಾದೇಶ ಅಧ್ಯಕ್ಷರಾದ ರುದ್ರನಾಯಕ ಮುತ್ತುರಾಜು ಉಪಾಧ್ಯಕ್ಷರ ಪ್ರಭುಸ್ವಾಮಿ ಸದಸ್ಯರಾದ ಚಂದ್ರ ಮುರಳಿ ರಾಜೇಂದ್ರ ಸೈಯದ್ ಜಬ್ಬಾರ್ ಕೃಷ್ಣಮೂರ್ತಿ ಶಿವಮೂರ್ತಿ ರಾಜೇಂದ್ರ ಮಹದೇವ ರುಕ್ಮಿಣಿ ಗೀತಾ ಪಂಚಾಯ್ತಿ ಸಿಬ್ಬಂದಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago