Distribute Adequate Seed Fertilizer to Farmers: Rayardi Notice

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ (ಯಲಬುರ್ಗಾ) : ಪಟ್ಟಣದ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಬಿತ್ತನ ಬೀಜಗಳನ್ನು ರೈತರಿಗೆ ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಶ್ರೀ ಬಸವರಾಜ ರಾಯರಡ್ಡಿ ಅವರು ವಿತರಿಸಿದರು
ಬಳಿಕ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಕ್ಷೇತ್ರದ ರೈತರಿಗೆ ಸಮರ್ಪಕವಾಗಿ ಬೀಜ ಗೊಬ್ಬರ ವಿತರಣೆ ಮಾಡಬೇಕು ಅಲ್ಲದೇ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಿ, ಕೃಷಿ ಇಲಾಖೆಯ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗ ರೈತರು ಪಡೆಯಬೇಕು ಎಂದು ಸಲಹೆ ನೀಡಿದರು.
ಈ ವೇಳೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರು, ಗಣ್ಯರು ಉಪಸ್ಥಿತರಿದ್ದರು.