A farmer committed suicide by consuming poison in the field
ರಾಯಚೂರು: ಬೆಳೆ ನಷ್ಟ ದಿಂದ ಮತ್ತು ಮಾನಸಿಕ ಅವೇದನೆ ತಾಳಲಾರದೆ ರೈತರೊಬ್ಬರು ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೃತ ರೈತನನ್ನು ಮಹಾದೇವ ಸಾಗರ್ (42) ಎಂದು ಗುರುತಿಸಲಾಗಿದ್ದು, ತಮ್ಮ ಹೆಸರಿನಲ್ಲಿ ನಾಲ್ಕು ಎಕರೆ ಜಮೀನು ಹೊಂದಿದ್ದಾರೆ.ಹೊಲದಲ್ಲಿ ಹತ್ತಿ ಹಾಗೂ ಮಿಶ್ರ ಬೆಳೆ ಹಾಕಿದ್ದರು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶ ವಾಗಿತ್ತು ಸ್ಥಳೀಯ ಯೂನಿಯನ್ ಬ್ಯಾಂಕಿನಲ್ಲಿ ₹ 1.0 ಲಕ್ಷ ಕೃಷಿ ಸಾಲ ಹಾಗೂ ₹ 6 ಲಕ್ಷ ಕೈಗಡ ಸಾಲ ಮಾಡಿದ್ದರು ಎನ್ನಲಾಗಿದೆ.
ಹೊಲಕ್ಕೆ ನೀರು ಹರಿಸಲು ಎಂದು ಹೋಗಿ ಹೊಲದಲ್ಲಿ ಇದ್ದ ಔಷದಿ ಕುಡಿದಿದ್ದಾರೆ ಮನೆಯವರು ಹುಡುಕಾಟ ನಡೆಸಿದಾಗ ಹೊಲದಲ್ಲಿ ಅಲ್ಪ ಸ್ವಲ್ಪ ಜೀವ ಇತ್ತು ಇದನ್ನು ತಿಳಿದ ಕುಟುಂಬ ದವರು ವಿಷಯವನ್ನು ವಿಚಾರಿಸಿದಾಗ
ವಿಷ ಸೇವಿಸಿದ ಎಂದು ತಿಳಿದ ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಳಿಸಿದ್ದರು . ಚಿಕಿತ್ಸೆ ಫಲಕಾರಿಯಾಗದೆ ಬುದುವಾರ ಸಂಜೆ 4:00 ಗಂಟೆಗೆ ಮೃತರಾಗಿರುವರೆಂದು ಪೊಲೀಸರು ತಿಳಿಸಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…