ಕಲ್ಯಾಣಸಿರಿ ವಿಶೇಷ

ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ

Leadership and skill development training for awareness center supervisors

ವಿಜಯನಗರ:ದಿನಾಂಕ 25/09/2024 ಬುಧುವಾರ ಶಿಕ್ಷಣ ಫೌಂಡೇಶನ್ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ 6 ತಾಲೂಕಿನ 40 ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಹಾಗೂ ಕೌಶಲ್ಯ ಅಭಿವೃದ್ಧಿ

ತರಬೇತಿಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀಯುತ ಕಾಂತರಾಜು D ಮತ್ತು ಶಿಕ್ಷಣ ಫೌಂಡೇಶನ್ ಸಂಸ್ಥೆಯ ಉತ್ತರ ಕರ್ನಾಟಕ ವಿಭಾಗದ ಸಂಯೋಜರಾದ ಶ್ರೀಯುತ ಶರಣಪ್ಪ ಕಟ್ಟಿಮನಿ ಹಾಗೂ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ರಂಜನಿ ಬೆಂಗಳೂರು , ಇವರು ಉದ್ಘಾಟನೆ ಮಾಡಿದರು.
ಶಿಬಿರಾರ್ಥಿಗಳಿಗೆ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮವನ್ನು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ತರಬೇತಿ ಕುರಿತು ಹಾಗೂ ಲೈಬ್ರರಿಯನ್ ಪೋರ್ಟಲ್ ನಲ್ಲಿ ಸ್ವಸಹಾಯ ಸಂಘದ ಸದಸ್ಯರನ್ನು ನೊಂದಣಿ ಮಾಡುವ ಕುರಿತು ಮಾಹಿತಿ ನೀಡಲಾಯಿತು. ಮತ್ತು ತರಬೇತಿಯಲ್ಲಿ ವಿನೂತನ ಚಟುವಟಿಕೆಗಳಲ್ಲಿ ಶಿಬಿರಾರ್ಥಿಗಳು ಆಸಕ್ತಿಯಿಂದ ಭಾಗವಹಿಸುವುದರ ಮೂಲಕ ತರಬೇತಿಯೂ ಸಂಪೂರ್ಣ ಹಾಜರಾತಿಯೊಂದಿಗೆ ಯಶಸ್ವಿಯಾಗಿ ನಡೆಯಿತು.
ತರಬೇತಿಯಲ್ಲಿ ಜಿಲ್ಲಾ ಸಂಯೋಜಕರಾದ ಎಸ್.ಬಿ ಶ್ರೀಧರ್ ಹಾಗೂ ಬಸವರಾಜು ಬಿ. ಎ ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

17 minutes ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

24 minutes ago

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

2022 State Level Book Selection List Published: Objection Invited 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

45 minutes ago

ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Awareness program as part of World Hearing Day ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಕೊಪ್ಪಳ…

49 minutes ago