Breaking News

ಪತ್ರಕರ್ತರ ಉಚಿತ ಬಸ್ ಪಾಸ್ಅವೈಜ್ಞಾನಿಕ : ಮಲ್ಲಿಕಾರ್ಜುನ್ ಬಂಗ್ಲೆ,

Free bus pass for journalists is unscientific: Mallikarjun Bangle

ಜಾಹೀರಾತು

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ರಾಜ್ಯ ಸರಕಾರ ಗ್ರಾಮೀಣ ಪತ್ರಕರ್ತರಿಗೆ ಗುರವಾರದಂದು ನೀಡಿರುವ ಉಚಿತ ಬಸ್ ಪಾಸ್ ಜಾರಿ ಅವೈಜ್ಞಾನಿಕವಾದ ಆದೇಶವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಖಂಡನೆ ವ್ಯಕ್ತಪಡಿಸಿದರು.

ಬಂಗ್ಲೆಯವರು ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ರಾಜ್ಯದ 200 ತಾಲೂಕುಗಳಲ್ಲಿ ಕೆಲಸ ಮಾಡುವ ತಾಲೂಕ ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಖಾಯಂ ನೇಮಕಾತಿ ಆದೇಶ ಪತ್ರ ನೀಡಿರುವುದಿಲ್ಲಾ.

ಹೀಗಿರುವಾಗ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರದಿಂದ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದೆ ಎಂದು ಹೇಳಿದರು.

ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಖಾಯಂ ಪತ್ರಕರ್ತರೆಂದು ನೇಮಕಾತಿ ಆದೇಶ ಪ್ರತಿ ಕೊಟ್ಟಿರುವುದಿಲ್ಲಾ, ಆದರೆ ಸರ್ಕಾರ ಈ ಆದೇಶ ಪ್ರತಿ ಕೇಳಿರುವುದು ಹಾಸ್ಯಸ್ಪದ ಸಂಗತಿಯಾಗಿದೆ ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.

ರಾಜ್ಯದ ಮಹಿಳೆಯರಿಗೆ ಬಸ್ ಗಳಲ್ಲಿ ಸಂಚರಿಸಲು 1800 ಕೋಟಿ ರೂ.ಗಳ ವೆಚ್ಚವನ್ನು ನೀಡಿರುವ ಸರಕಾರ ಯಾವುದೇ ಮಾನದಂಡಗಳನ್ನು ಕೇಳಿಲ್ಲಾ, ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಕರ್ತರು ಸಮಾಜದಲ್ಲಿ ಜನರ ಕೊಂಡಿಯಾಗಿ ಕೆಲಸ ಮಾಡುತ್ತಿರುವವರಿಗೆ ಈ ವಿಷಯದಲ್ಲಿ ಇಂತಹ ಧೋರಣೆ ತಳೆದಿರುವುದು ಸರಿಯಾದ ಕ್ರಮವಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಹೊರಡಿಸಿರುವ ಆದೇಶದಂತೆ ರಾಜ್ಯಾದ್ಯಂತ 100 ಅರ್ಜಿ ಸಲ್ಲಿಕೆಯಾದರೆ ಹೆಚ್ಚು ಎಂದಿರುವ ಮಲ್ಲಿಕಾರ್ಜುನ್ ಬಂಗ್ಲೆ, 5222 ಪತ್ರಕರ್ತರಲ್ಲಿ ಖಾಯಂ ನೇಮಕಾತಿ ಪತ್ರ ಎಷ್ಟು ಜನರ ಬಳಿ ಇದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ ಎಂದು ಪ್ರಶ್ನಿಸಿದರು.

ಈ ಆದೇಶವು ನಾಯಿಯ ಜೇನು ಇದ್ದಂತೆ ಇದು ಪೂಜೆಗೂ ಬರುವುದಿಲ್ಲಾ ಮತ್ತು ತಿನ್ನಲು ಬರುವುದಿಲ್ಲಾ ಆದರೆ ಸರ್ಕಾರ ಪತ್ರಕರ್ತರಿಗೆ ಬಸ್ ಪಾಸ್ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದು ಪತ್ರಕರ್ತರ ಕಿವಿಯ ಮೇಲೆ ಹೂವಿಟ್ಟಂತಾಗಿದೆ ಎಂದು ಟೀಕಿಸಿದರು.

ಕೂಡಲೇ ಆದೇಶವನ್ನು ಮಾರ್ಪಡಿಸಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ಆಗ್ರಹಿಸಿದರು.

ಇಲ್ಲದಿದ್ದಲ್ಲಿ ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು. ಹಾಗೆಯೇ ಇದರ ವಿರುದ್ಧ ರಾಜ್ಯಾದ್ಯಾಂತ ಹೋರಾಟವನ್ನು ಸಂಘಟಿಸಲಾಗುತ್ತದೆ ಎಂದು ಎಚ್ಚರಿಸಿದರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.