Breaking News

ಪತ್ರಕರ್ತರ ಮೂಗಿಗೆ ತುಪ್ಪ ಹಚುವ ಕೆಲಸ ಮಾಡಿದೆ ರಾಜ್ಯ ಸರ್ಕಾರ. ಡಾ.ಭಾಸ್ಕರ್ ಆಕ್ರೋಶ

The state government has worked to rub the noses of journalists. Dr. Bhaskar is outraged

ಜಾಹೀರಾತು

ತಿಪಟೂರು . ದಿನಾಂಕ 26/09/24 ಗುರುವಾರ ಕರ್ನಾಟಕ ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ 2024.25 ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿದ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಿಸುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದ್ದು ಇದರಲ್ಲಿ ಬಹುತೇಕ ಶೇಕಡ 1% ರಷ್ಟು ಪತ್ರಕರ್ತರಿಗೆ ಬಸ್ ಪಾಸ್ ಸಿಗುವ ಸಾಧ್ಯತೆ ಇದೆ ಏಕೆಂದರೆ ರಾಜ್ಯ ಮಟ್ಟದ ಪತ್ರಿಕೆಗಳ ಸಂಪಾದಕರು ತಾಲ್ಲೂಕು ಹಾಗೂ ಹೋಬಳಿ ವರದಿಗಾರರಿಗೆ ಪೂರ್ಣಾವಧಿ ಪತ್ರಕರ್ತರು ಅಂತ ನೇಮಕಾತಿ ಪತ್ರ ಕೊಡುವುದಿಲ್ಲ ಇದರಿಂದ ಬಹಳಷ್ಟು ಸುದ್ದಿಗಾರರಿಗೆ ಬಸ್ ಪಾಸ್ ಸೌಲಭ್ಯ ಸಿಗುವ ಸಾಧ್ಯತೆ ತುಂಬಾ ಕಡಿಮೆ ಇದೆ. ಇದರಿಂದ
ಸರ್ಕಾರ ತನ್ನ ಈ ನಡೆಯನ್ನು ಸಮರ್ಥಿಸಿಕೊಳ್ಳಲು ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅದೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಯ 11 ನೂತನ ಸದಸ್ಯರ ಪಟ್ಟಿಯಲ್ಲಿ ಹಿರಿಯ ಪತ್ರಕರ್ತರಾದ ಶಿವಾನಂದ ತಗಡೂರು ಅವರ ಹೆಸರನ್ನು ಸೇರಿಸಲಾಗಿದ್ದು ರಾಜ್ಯ ಸರ್ಕಾರ ಪತ್ರಕರ್ತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಿದೆ. ಎಂದು ಭಾಸ್ಕರ್ ಪತ್ರಿಕೆ ಸಂಪಾದಕರು ಹಾಗೂ ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಗೌರವಾಧ್ಯಕ್ಷರಾದ ಡಾ.ಭಾಸ್ಕರ್ ಆಕ್ರೋಶ ವ್ಯಕ್ತಪಡಿಸಿದರು .
ವರದಿ ಮಂಜು ಗುರುಗದಹಳ್ಳಿ

About Mallikarjun

Check Also

ಗುರುಪೌರ್ಣಮಿ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ: ಟಿ.ರಾಮಕೃಷ್ಣ

Special religious program on the occasion of Gurupournami: T. Ramakrishna ಗಂಗಾವತಿ, ಜು.08: ಹೊರವಲಯದ ಆನೆಗೊಂದಿ ರಸ್ತೆಯಲ್ಲಿರುವ …

Leave a Reply

Your email address will not be published. Required fields are marked *