ಕಲ್ಯಾಣಸಿರಿ ವಿಶೇಷ

ಗುಡೇಕೋಟೆ ಕೆಪಿಎಸ್ ಶಾಲೆಮುಖ್ಯಶಿಕ್ಷಕಿಯಾಗಿ ರುಕ್ಮಿಣಿಬಾಯಿಗೆ ಸ್ವಾಗತಿಸಿದ ಶಿಕ್ಷಕರು

Gudekote KPS School teachers welcomed Rukminibai as head teacher

ಗುಡೇಕೋಟೆ: ಕೂಡ್ಲಿಗಿ ತಾಲ್ಲೂಕಿನ ರಾಮಸಾಗರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ, ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲೆ ವಿಭಾಗಕ್ಕೆ ಕಾಯಂ ಮುಖ್ಯ ಶಿಕ್ಷಕಿಯಾಗಿ ಪದೋನ್ನತಿ ಹೊಂದಿರುವ ರುಕ್ಮಿಣಿಬಾಯಿ ಅವರು ಶುಕ್ರವಾರ ಕರ್ತವ್ಯಕ್ಕೆ ಹಾಜರಾದರು. ಇವರಿಗೆ ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಗುಡೇಕೋಟೆ ಗ್ರಾಪಂ ಅಧ್ಯಕ್ಷ ಎನ್ ಕೃಷ್ಣ ಮಾತನಾಡಿ, ‘ಶಾಲೆಯ ಭೌತಿಕ ಸೌಲಭ್ಯಗಳ ಸುಧಾರಣೆ ಮತ್ತು ಕಲಿಕಾ ಪ್ರಗತಿಯಲ್ಲಿ ಮುಖ್ಯ ಶಿಕ್ಷಕರ ಪಾತ್ರ ಅಪಾರ. ಅವರು ಕ್ರಿಯಾಶೀಲತೆಯ ಜೊತೆಗೆ ದಕ್ಷತೆ ಮತ್ತು ಸಾಮರಸ್ಯ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದಾಗ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ’ ಎಂದರು.

‘ಸಹೋದ್ಯೋಗಿಗಳು, ವಿದ್ಯಾರ್ಥಿಗಳು, ಶಾಲಾ ಉಸ್ತುವಾರಿ ಸಮಿತಿ, ಪೋಷಕರು, ಅಧಿಕಾರಿಗಳ ಜೊತೆಗೆ ಉತ್ತಮ ಸಂಪರ್ಕ ಸಾಧಿಸಿ, ಇವೆರೆಲ್ಲರ ಸಹಕಾರ ಪಡೆದು ಶಾಲಾಭಿವೃದ್ಧಿಗೆ ಶ್ರಮಿಸುವುದು ತುಂಬಾ ಸವಾಲಿನ ಕೆಲಸ. ಇದನ್ನು ಸಮರ್ಥವಾಗಿ ನಿರ್ವಹಿಸುವ ಗುಣ ಶ್ರೀಮತಿ ರುಕ್ಮಿಣಿಬಾಯಿ ಅವರಿಗಿದೆ’ ಎಂದು ಹೇಳಿದರು.

ನೂತನ ಮುಖ್ಯಶಿಕ್ಷಕಿ ರುಕ್ಮಿಣಿಬಾಯಿ ಮಾತನಾಡಿ, ‘ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತೆರೆದ ಮನಸ್ಸಿನಿಂದ, ಪರಸ್ಪರ ನಂಬಿಕೆ ಮತ್ತು ಗೌರವ ಭಾವದಿಂದ ಕಾರ್ಯನಿರ್ವಹಿಸಿದರೆ ಕಲಿಕೆಯ ಗುಣಮಟ್ಟ ಹೆಚ್ಚಿಸಬಹುದು’ ಎಂದರು.

ಈ ಸಂದರ್ಭದಲ್ಲಿ ಗುಡೇಕೋಟೆ ಕೆಪಿಎಸ್ ಪ್ರೌಢಶಾಲಾ ವಿಭಾಗದ ಶಿಕ್ಷಕರು,ಸಹ ಶಿಕ್ಷಕರು,ಗುರುಮಾತೆಯರು, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು, ಶಿಕ್ಷಣ ಪ್ರೇಮಿಗಳು ಊರಿನ ಮುಖಂಡರು, ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago