ಕಲ್ಯಾಣಸಿರಿ ವಿಶೇಷ

ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಡಿಜಿಟಲ್ ಕ್ರಾಂತಿ: ವಾಲ್ಗೋ ಇನ್ಫ್ರಾ 5ಜಿ ಮತ್ತು ದತ್ತಾಂಶ ಸೇವೆಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ


Digital Revolution at Mysore Medical College: Chief Minister Siddaramaiah Launches Valgo Infra 5G and Data Services


ಮೈಸೂರು, ಸೆ,29; ದೇಶದ ಅತ್ಯಂತ ಪುರಾತನವಾದ ಮೈಸೂರು ವೈದ್ಯಕೀಯ ಕಾಲೇಜು ಶತಮಾನೋತ್ಸವ ಸಂದರ್ಭದಲ್ಲಿ ಡಿಜಿಟಲ್ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ನಾಂದಿಹಾಡಿದೆ. ವೈದ್ಯಕೀಯ ಕಾಲೇಜಿನ ವೈದ್ಯರು, ರೋಗಿಗಳು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಶರವೇಗದ ಇಂಟರ್ ನೆಟ್ ಸೌಲಭ್ಯ ಕಲ್ಪಿಸುವ ವಾಲ್ಗೋ ಇನ್ಫ್ರಾ ಸಂಸ್ಥೆಯ 5ಜಿ ಸಂಪರ್ಕ ಜಾಲ ಮತ್ತು ದತ್ತಾಂಶ ಸೇವೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ವೈದ್ಯಕೀಯ ಕಾಲೆಜಿನಲ್ಲಿ ಆರೋಗ್ಯ ಸೇವೆಗಳನ್ನು ಸುಗಮ ಮತ್ತು ಸುಲಲಿತಗೊಳಿಸುವ ನಿಟ್ಟಿನಲ್ಲಿ ವಾಲ್ಗೊ ಇನ್ಫ್ರಾ ಸಿಇಒ ಮತ್ತು ಎಂಡಿ ನಂ.1 ಶ್ರೀಧರ್ ರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ನಿರ್ದೇಶಕರಾದ ಸುಜಾತಾ ರಾಥೋಡ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ಕೆ.ಆರ್. ದಾಕ್ಷಾಯಣಿ ಮತ್ತಿತರರ ಗಣ್ಯರು ಪಾಲ್ಗೊಂಡಿದ್ದರು.
ಹೈದರಾಬಾದ್ ಮೂಲದ ತಂತ್ರಜ್ಞಾನ ಕಂಪನಿಯಾದ ವಾಲ್ಗೊ ಇನ್ಫ್ರಾ, ಮೈಸೂರು ವೈದ್ಯಕೀಯ ಕಾಲೇಜು ಕ್ಯಾಂಪಸ್ಗೆ ತನ್ನ ಅತ್ಯಾಧುನಿಕ 5ಜಿ ಮತ್ತು ದತ್ತಾಂಶ ಸೇವೆಗಳನ್ನು ತಂದಿದೆ, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ರೋಗಿಗಳಿಗೆ ಶರವೇಗದಲ್ಲಿ ಇಂಟರ್ನೆಟ್ ಹೆಚ್ಚಿಸುವ ಜೊತೆಗೆ ಕಾಲೇಜಿನ ಡಿಜಿಟಲ್ ಮೂಲಸೌಕರ್ಯವನ್ನು ಕ್ರಾಂತಿಕಾರಕಗೊಳಿಸಲು ಮತ್ತು ಒಟ್ಟಾರೆ ಶೈಕ್ಷಣಿಕ ಮತ್ತು ಆರೋಗ್ಯ ಅನುಭವವನ್ನು ಹೆಚ್ಚಿಸಲು ಸಹಕಾರಿಯಾಗಿದೆ.
ವಾಲ್ಗೋ ಇನ್ಫ್ರಾ ಸಿಇಒ ಮತ್ತು ಎಂಡಿ ನಂ.1 ಶ್ರೀಧರ್ ರಾವ್ ಮಾತನಾಡಿ, “ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವವನ್ನು ಆಚರಿಸುತ್ತಿರುವ ಈ ಮಹತ್ವದ ಕಾರ್ಯಕ್ರಮದ ಭಾಗವಾಗಲು ನಾವು ರೋಮಾಂಚನಗೊಂಡಿದ್ದೇವೆ. ಶೈಕ್ಷಣಿಕ ಮತ್ತು ಸಂಶೋಧನಾ ಪ್ರಯತ್ನಗಳನ್ನು ಬೆಂಬಲಿಸುವ ಮೂಲಕ ಇತ್ತೀಚಿನ ತಾಂತ್ರಿಕ ಪ್ರಗತಿಗಳೊಂದಿಗೆ ಕಾಲೇಜು ಮತ್ತು ಅದರ ಪಾಲುದಾರರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿದ್ದೇವೆ.” ಎಂದರು.
ಭಾರತದ ಅತ್ಯಂತ ಹಳೆಯ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಮೈಸೂರು ವೈದ್ಯಕೀಯ ಕಾಲೇಜು, ಈ ಪ್ರದೇಶದ ಆರೋಗ್ಯ ರಕ್ಷಣೆಯಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ವಾಲ್ಗೊ ಇನ್ಫ್ರಾ ಅವರ ಅತ್ಯಾಧುನಿಕ ತಂತ್ರಜ್ಞಾನದ ಏಕೀಕರಣದೊಂದಿಗೆ, ಕಾಲೇಜು ತನ್ನ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ವಿಶ್ವ ದರ್ಜೆಯ ಡಿಜಿಟಲ್ ಮೂಲಸೌಕರ್ಯಕ್ಕೆ ತನ್ನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಪ್ರವೇಶವನ್ನು ನೀಡಲು ಸನ್ನದ್ಧವಾಗಿದೆ ಎಂದು ಹೇಳಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago