Rahul Ratnam Pandey promises site inspection for construction of toilet in Anegundi on Oct-2: Sindhu D
ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮವು ಐತಿಹಾಸಿಕ, ಪುರಾಣ, ಪೌರಾಣಿಕ ಹಾಗೂ ವಿಶ್ವ ಪಾರಂಪರಿಕ ಪ್ರಸಿದ್ಧ ಪ್ರದೇಶವಾಗಿದ್ದು, ಈ ಪ್ರದೇಶಕ್ಕೆ ದೇಶ-ವಿದೇಶಗಳಿಂದ ಹಲವಾರು ಪ್ರವಾಸಿಗರು ಬಂದು ವೀಕ್ಷಿಸಿ ಹೋಗುವಂತಹ ಸ್ಥಳವಾಗಿರುತ್ತದೆ. ದುರಂತವೇನೆAದರೆ, ಆನೆಗುಂದಿ ಭಾಗದಲ್ಲಿ ಸಾರ್ವಜನಿಕರಿಗೆ ಶೌಚಾಲಯ ಇರುವುದಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಜಿಲ್ಲಾಡಳಿತಕ್ಕೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿರುವುದಿಲ್ಲ. ಈಗ ಜಿಲ್ಲಾ ಪಂಚಾಯತ್ನ ಸಿ.ಇ.ಓ ಆದ ರಾಹುಲ್ ರತ್ನಂ ಪಾಂಡೆ ಅವರು ಆನೆಗೊಂದಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಲು ಅಕ್ಟೋಬರ್-೨ ರಂದು ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪರಿಸರ ಪ್ರೇಮಿಯಾದ ಕೇಂದ್ರೀಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿನಿ ಸಿಂಧು ಡಿ ರವರು ಹರ್ಷ ವ್ಯಕ್ತಪಡಿಸಿದರು.
ಈ ಭಾಗದಲ್ಲಿ ಶಾರ್ವಜನಿಕ ಶೌಚಾಲಯ ಇಲ್ಲದೇ ಸುತ್ತ-ಮುತ್ತಲಿನ ಪ್ರದೇಶದಲ್ಲಿರುವ ಹೋಟೆಲ್ಗೆ ಹೋಗಿ ಶೌಚಾಲಯ ಉಪಯೋಗಿಸಿಕೊಂಡು ಬರುವ ಸ್ಥಿತಿ ಬಂದೊದಗಿರುತ್ತದೆ. ಪ್ರಸ್ತುತ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರು ಶೌಚಾಲಯ ನಿರ್ಮಾಣಕ್ಕೆ ಮುಂದಾಗಲು ಭರವಸೆ ನೀಡಿದ್ದು, ಈ ಭಾಗದ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಹರ್ಷದಾಯಕವಾಗಿದೆ. ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅಕ್ಟೋಬರ್-೨ ಬೆಳಿಗ್ಗೆ ೧೧ ರವರೆಗೆ ಕಾಯ್ದು, ಒಂದು ವೇಳೆ ಮಾತು ತಪ್ಪಿದಲ್ಲಿ ಬೆಳಿಗ್ಗೆ ೧೧ ಗಂಟೆಯ ನಂತರ ಪ್ರತಿಭಟನೆ ನಡೆಸಲಗುವುದು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…