ಗಂಗಾವತಿ ರಾಷ್ಟ್ರೀಯ ಬಸವದಳದವರ ನೇತೃತ್ವದಲ್ಲಿ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಥಾಪಠಣಾ ಅ 3, ರಿಂದಶರಣರಮನೆಯಲ್ಲಿ ಕಾರ್ಯಕ್ರಮ ಪ್ರಾರಂಭ

Mallikarjun
1 Min Read

Under the leadership of Gangavati Rashtriya Basavadal, program started at Kalyan Kranti Samsmarane Kathapathana A 3, Rinsharanaramane.

ಗಂಗಾವತಿ:ನಗರದ ರಾಷ್ಟ್ರೀಯ ಬಸವದಳದವರ ನೇತೃತ್ವದಲ್ಲಿ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಥಾಪಠಣ ಅಕ್ಟೋಬರ್ 3, ಗುರುವಾರದಿಂದ ಜರುಗಲಿದೆ. ಕ್ರಿ.ಶ.12ನೇ – ಶತಮಾನದಲ್ಲಿ ಕಲ್ಯಾಣಕ್ರಾಂತಿ ಅಪೂರ್ವ – ದಿಟ್ಟ ಹೆಜ್ಜೆಯ ಹೋರಾಟದ ಫಲಶೃತಿ ಭಾರತ ದೇಶದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಇಬ್ಬರು ವರ್ಣೀಯರ ನಡುವೆ ನಂಟಸ್ಥಿಕೆ, ಬಸವಣ್ಣನವರ ನೇತೃತ್ವದಲ್ಲಿ ಜರುಗಿತ್ತು. ಆಘಟನೆಗೆ ಬಸವಣ್ಣನವರನ್ನು ಗಡಿಪಾರು ಮಾಡಲಾಯಿತು. ಹರಳಯ್ಯ, ಮಧುವರಸ, ಶೀಲವಂತರನ್ನು ಎಹೋಟಿ ಶಿಕ್ಷೆಗೆ ಗುರಿಪಡಿಸಲಾಯಿತು.

ಈ ಎಲ್ಲಾ ಬಲಿದಾನವಾದುದು ಸ್ವಾರ್ಥಕ್ಕಾಗಿ ಅಲ್ಲ ಮತ್ತು ಹೆಣ್ಣು ಹೊನ್ನು ಮಣ್ಣಿನ ಆಸಿಗೆಅಲ್ಲ ಇವೆಲ್ಲವೂ ಸಮಾನತೆಯನ್ನು ಸಾಧಿಸಲಿಕ್ಕೆ ಎಂಬ ಅಂಶವನ್ನು ಬಿಂಬಿಸುವ ಉದ್ದೇಶವೇ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಥಾ ಪಠಣದ ಉದ್ದೇಶ. ಅಕ್ಟೋಬರ್‌ 03 ರಿಂದ 11 ಅಕ್ಟೋಬ‌ರ್ ವರೆಗೆ ಸಂಜೆ 6 ರಿಂದ 7.30 ರವರೆಗೆ ಶರಣರ ಮನೆಯಲ್ಲಿ ಕಲ್ಯಾಣ ಕ್ರಾಂತಿ ಕಥಾಪಠಣ ಜರುಗಲಿದೆ. 12ನೇ ಅಕ್ಟೋಬರ್ ದಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಮಂಟಪದಲ್ಲಿ ಕಲ್ಯಾಣ ಕ್ರಾಂತಿಯ ಕಥಾ ಪಠಣ ಮಂಗಲ ಸಮಾರೋಪ ಹಾಗೂ ಬಸವ ಧರ್ಮ ವಿಜಯೋತ್ಸವ ಜರುಗಲಿದೆ.ಎಂದು ಅಧ್ಯಕ್ಷ ದೀಲಿಪ್ ವಂದಾಲ ತಿಳಿಸಿದ್ದಾರೆ.

Share This Article
Leave a Comment