ಕಲ್ಯಾಣಸಿರಿ ವಿಶೇಷ

ನಿಯಮ ಉಲ್ಲಘಿಸಿದರೆ, ಕಾನೂನಿನಕ್ರಮ:ಸಹಾಯಕ ಔಷಧ ನಿಯಂತ್ರಕ ವೆಂಕಟೇಶ ರಾಠೋಡ.

Violation of rules, legal action:Assistant Drug Controller Venkatesh Rathoda.

ಗಂಗಾವತಿ:ವೈಧ್ಯರ ಸಲಹಾ ಚೀಟಿ ಇಲ್ಲದೇ,ನಿರ್ದಿಷ್ಟ ಪಡಿಸಿದ ಔಷಧಗಳ ಮಾರಾಟ ಮಾಡಿದರೆ,ಔಷಧ ಕಾಯ್ದೆ-1940 ಮತ್ತು ನಿಯಮ-1945 ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ವೃತ್ತದ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ ರಾಠೋಡ ಎಚ್ಚರಿಸಿದರು.

ರವಿವಾರ ನಗರದ ಔಷಧೀಯ ಭವನದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಔಷಧ ವ್ಯಾಪಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಕೆಲವು ವ್ಯಸನಿಗಳು,ಅಮಲು‌ ಬರಿಸುವಂತಹ ಸೈಕೊಟ್ರೊಪಿಕ್ ಔಷಧಗಳನ್ನು ಅಸಹಜ ಸೇವನೆಯ ಮೂಲಕ ದೇಹಕ್ಕೆ ಸೇರಿಸಿಕೊಳ್ಳುವ ವರದಿಗಳು ಗಂಗಾವತಿಯಲ್ಲಿ ಕಂಡು ಬರುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.ಈ ಕಾರಣಕ್ಕಾಗಿ ಬಳ್ಳಾರಿ ವಿಭಾಗ ವ್ಯಾಪ್ತಿಯ ಸಹಾಯಕ ಔಷಧ ನಿಯಂತ್ರಕರ ಮತ್ತು ಔಷಧ ಪರಿವೀಕ್ಷಕರ ತಂಡದಿಂದ ಔಷಧ ಅಂಗಡಿಗಳ ಮೇಲೆ ಧಿಡೀರ್ ದಾಳಿ‌ ನಡೆಸಲಾಗಿದೆ,ಈ ಸಂದರ್ಭದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಕ್ರಮ ಕೈಗೊಳ್ಳುವ ಪ್ರಕ್ರೀಯೆ ನಡೆದಿದೆ ಎಂದು ತಿಳಿಸಿದರು.

ಔಷಧ ಮಾರಾಟ ಮಳಿಗೆಗಳಲ್ಲಿ ರಿಜಿಸ್ಟರ್ಡ್ ಫ಼ಾರ್ಮಾಸಿಸ್ಟ ಗೈರು ಹಾಜರಿ ಕಂಡು ಬಂದರೆ,ಅಂತಹ ಅಂಗಡಿಗಳ ಪರವಾನಿಗೆ ರದ್ದು ಗೊಳಿಸಲಾಗುವುದು ಎಂದು ರಾಠೋಡ ಎಚ್ಚರಿಸಿದರು.

ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಔಷಧ ಅಂಗಡಿಗಳ ಪರಿವೀಕ್ಷಣೆ ನಡೆಸಲಾಗುವುದು, ನೂನ್ಯತೆಗಳು ಕಂಡು ಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago