ಕಲ್ಯಾಣಸಿರಿ ವಿಶೇಷ

ಔಷಧಿ ಮಾರಾಟದಲ್ಲಿ ಜಾಗ್ರತೆ ಇರಲಿ: ಡಿ.ಎಸ್.ಪಿ. ಪಾಟೀಲ್

Be careful in selling medicines: D.S.P. Patil

ಗಂಗಾವತಿ: ಮತ್ತೇರಿಸುವ ಮತ್ತು ಚಟ ಹಚ್ಚುವ ಔಷಧಗಳ ಮಾರಾಟದಲ್ಲಿ ಜಾಗ್ರತೆ ವಹಿಸಬೇಕೆಂದು ಗಂಗಾವತಿ ಉಪ ವಿಭಾಗದ ಉಪ ಪೋಲೀಸ್
ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಔಷಧ ವ್ಯಾಪಾರಿಗಳಿಗೆ ಕರೆ ನೀಡಿದರು.

ಅವರು ಸೋಮವಾರ ಸಾಯಂಕಾಲ ನಗರದ ಔಷಧೀಯ ಭವನದಲ್ಲಿ ಔಷಧ ವ್ಯಾಪಾರಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ನಗರದ ಹಲವು ಕಡೆ ಮತ್ತು ಬರಿಸುವ ಔಷಧ ಮಾರಾಟ ಮತ್ತು ಸೇವನೆಯ ಪ್ರಕರಗಳು ಕಂಡು ಬಂದಿದ್ದು,ಅದಕ್ಕಾಗಿ ಔಷಧ ಮಾರಾಟಗಾರರು ಜಾಗ್ರತೆಯಿಂದ ಔಷಧ ಮಾರಾಟ ಮಾಡಬೇಕೆಂದು ಹೇಳಿದರು.

ನಗರ ಠಾಣೆಯ ಇನ್ಸಪೆಕ್ಟರ್ ಪ್ರಕಾಶ ಮಾಳೆ ಅವರು ಮಾತನಾಡಿ,ನಗರದ ಕೆಲವು ಪ್ರದೇಶಗಳನ್ನು
ಹೆಸರಿಸಿ, ಕೆಲವು ನಿರ್ದಿಷ್ಟ ಟ್ಯಾಬ್ಲೆಟ್ ಗಳನ್ನು ನೀರಿನಲ್ಲಿ ಕರಗಿಸಿ,ಇನ್ಸೂಲಿನ್ ಸಿರಂಜಿಗಳಿಂದ ನರಗಳ ಮೂಲಕ ಸೇವನೆ ಮಾಡುತ್ತಿರುವ ವರದಿಗಳು ಕೇಳಿ ಬಂದಿದ್ದು , ಅಂತಹ ಔಷಧಗಳ ಮಾರಾಟ ಜಾಲದ ಪತ್ತೆಗೆ ಪೋಲೀಸ್ ಇಲಾಖೆ ಪ್ರಯತ್ನಿಸುತ್ತಿದೆ,ಈ ವಿಷಯವಾಗಿ ಸಾರ್ವಜನಿಕರು ಇಂತಹ ಔಷಧಗಳ ಮಾರಾಟ ಮತ್ತು ಸೇವನೆಯ ಬಗ್ಗೆ ಮಾಹಿತಿ ನೀಡಬೇಕೆಂದು ಕೋರಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಮಾತನಾಡಿ,ತಜ್ಞ ವೈಧ್ಯರ ಸಲಹಾ ಚೀಟಿಗಳಿಗೆ ಮಾತ್ರ ಔಷಧ ಮಾರಾಟ ಮಾಡುವ ಮೂಲಕ ಸಾರ್ವಜನಿಕರ ಆರೋಗ್ಯ ಕಾಪಾಡಬೇಕೆಂದು ಹೇಳಿದರು.ಗಂಗಾವತಿ ನಗರ ಭತ್ತದ ಕಣಜ ಎಂದು ಹೆಸರಾಗಿದ್ದು,ಅಂತಹ ನಗರದ ಹೆಸರಿಗೆ ಕಪ್ಪು‌ ಚಿಕ್ಕೆ ಆಗಬಲ್ಲ ಯಾವುದೇ ಪ್ರಕರಣಗಳು‌ ನಡೆಯಬಾರದು ತಿಳಿಸಿದರು.

ಔಷಧ ಮತ್ತು ಕಾಂತಿವರ್ದಕ ಕಾಯ್ದೆ ಹಾಗೂ ನಿಯಮಗಳು ಉಲ್ಲಂಘನೆ ಕಂಡು ಬಂದರೆ,ತಮ್ಮ ಇಲಾಖೆಗೆ ‌ಮಾಹಿತಿ ನೀಡಬೇಕೆಂದು ಕೊಪ್ಪಳ ವೃತ್ತದ ಸಹಾಯಕ ಔಷಧ ನಿಯಂತ್ರಕರಾದ ವೆಂಕಟೇಶ ರಾಠೋಡ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜನರಲ್ಲಿ ಜಾಗ್ರತೆ ಮೂಡಿಸಲು, ವಿತರಿಸಲಾಗುತ್ತಿರುವ ಪೋಷ್ಟರಗಳನ್ನು ಪೋಲೀಸ್ ಅಧಿಕಾರಿಗಳು, ಔಷಧ ನಿಯಂತ್ರಕರು ಮತ್ತು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರು ಜಂಟಿಯಾಗಿ ಪ್ರದರ್ಶಿಸಿದರು.

ಕೊಪ್ಪಳ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಕಾರ್ಯಕ್ರಮವನ್ನು ನಿರೂಪಿಸಿದರು.

ಸಭೆಯಲ್ಲಿ ನಗರ ಸಭಾ ಸದಸ್ಯರಾದ ಮನೋಹರ ಸ್ವಾಮಿ ಹಿರೇಮಠ ಮತ್ತು ವಾಸುದೇವ ನವಲಿ ಸೇರಿದಂತೆ 80 ಕ್ಕೂ ಹೆಚ್ಚು ಜನ ಔಷಧ ವ್ಯಾಪಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago