Sharannavaratri celebrations at Mahamaya temple
ಅ. 11ರಂದು ಕುಕನೂರು ಮಹಾಮಾಯ(ದ್ಯಾಮವ್ವ) ದೇವಿ ಜಾತ್ರಾ ಮಹೋತ್ಸವ,,,
ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ (ಕುಕನೂರು) : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹಾಮಾಯಾ ದೇವಿ ಶರನ್ನವರಾತ್ರಿ ಉತ್ಸವವು ಇದೇ ಸ್ವಸ್ತಿಶ್ರೀ ಮನೃಪ ಶಾಲಿವಾಹನ ಶಕೆ 1946ನೇ ಕ್ರೋಧಿನಾಮ ಸಂವತ್ಸರ, ಆಶ್ವಿಜ, ಶುದ್ಧ, ಪ್ರತಿಪದದಿಂದ ಮಹಾನವಮಿ ಪರ್ಯಂತವಾಗಿ ಶರನ್ನವರಾತ್ರಿ ಉತ್ಸವವು ಸಕಲ ಪೂಜಾಧಿಗಳು ಹಾಗೂ ದೇವತಾ ವಾಹನ ಉತ್ಸವಗಳು 03-10-2024 ಗುರುವಾರ ದಿಂದ ಪ್ರಾರಂಭವಾಗಿ ದಿನಾಂಕ: 12-10-2024 ಶನಿವಾರ ವಿಜಯದಶಮಿ ಬನ್ನಿಹಬ್ಬ (ಬನ್ನಿ ಮುಡಿಯುವುದು) ದವರೆಗೆ ನಡೆಯಲಿವೆ.
ಪ್ರತಿ ದಿನ ಬೆಳಿಗ್ಗೆ ಕಾಕಡಾರತಿ, ಅಭಿಷೇಕ, ಕುಂಕುಮಾರ್ಚನೆ, ಅಲಂಕಾರ ಪೂಜಾ, ವಾಹನೋತ್ಸವ, ಮಂತ್ರಪುಷ್ಪ, ಅಷ್ಟಾವಧಾನ ಸೇವಾ ಹಾಗೂ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರುಗಲಿದ್ದು ಈ ಉತ್ಸವ ಕಾರ್ಯಕ್ರಮದಲ್ಲಿ ಸಕಲ ಸಧ್ಬಕ್ತಾಧಿಗಳು ಪಾಲ್ಗೊಂಡು, ಶ್ರೀ ಮಹಾಮಾಯಾ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಉಭಯ ಧರ್ಮಾಧಿಕಾರಿಗಳಾದ ವಲ್ಲಭರಾವ್ ರಂಗರಾಯಗೌಡ ದೇಸಾಯಿ ಸಿದ್ನೆಕೊಪ್ಪ ಹಾಗೂ ಬಂಡೇರಾಯಗೌಡ ಗುರುರಾಯಗೌಡ ದೇಸಾಯಿ ಮಾಳೇಕೊಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿನಾಂಕ: 11-10-2024 ಶುಕ್ರವಾರ ನವಮಿಯಂದು ಶ್ರೀ ಮಹಾಮಾಯ ದೇವಿಯ ಮಹಾರಥೋತ್ಸವ ಹಾಗೂ ದಿನಾಂಕ 12-10-2024 ಶನಿವಾರ ದಶಮಿಯಂದು ವಿಜಯದಶಮಿ (ಬನ್ನಿಹಬ್ಬ) ಕಾರ್ಯಕ್ರಮವಿರುವುದು.
ಈ ಉತ್ಸವದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಆರೋಗ್ಯ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿವರ್ಗ ಮತ್ತು ಕುಕನೂರು ಗ್ರಾಮದ ಸಮಸ್ತ ಭಕ್ತಾದಿಗಳು ಹಾಗೂ ಗುರು-ಹಿರಿಯರು ಶ್ರೀ ದೇವಿಯ ಜಾತ್ರಾ ಮಹೋತ್ಸವವನ್ನು ವ್ಯವಸ್ಥಿತವಾಗಿ ವಿಜೃಂಭಣೆಯಿಂದ ಸಂಪನ್ನಗೊಳಿಸಲು ಕಾರ್ಯನಿರ್ವಹಿಸಬೇಕೆಂದು ಪ್ರಕಟಣೆ ಮೂಲಕ ಕೋರಿದ್ದಾರೆ.
ಸೂಚನೆ : ಪರಸ್ಥಳದಿಂದ ಬರುವ ಭಕ್ತಾದಿಗಳಿಗೆ ಎಲ್ಲಾ ತರಹದ ಅನುಕೂಲತೆಗಳಾದ ಶುದ್ಧ ಕುಡಿಯುವ ನೀರು, ನವಮಿಯಂದು ಮಹಾಪ್ರಸಾದ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…