ಕಲ್ಯಾಣಸಿರಿ ವಿಶೇಷ

ಸ್ವಚ್ಛತೆ, ಶುಚಿತ್ವ ಕಡೆ ಗಮನಹರಿಸಿಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ್ ಹೇಳಿಕೆ

Focus on cleanliness, cleanliness First Additional District and Sessions Judge Mr. Sadananda Nagappa Naik’s Statement

ಗಂಗಾವತಿ : ಪ್ರತಿ ವರ್ಷ 7 ಲಕ್ಷಕ್ಕೂ ಹೆಚ್ಚು ಜನ ಸೊಳ್ಳೆ ಕಡಿತದಿಂದ ವಿವಿಧ ಕಾಯಿಲೆಯಿಂದ ಸಾವನ್ನಪ್ಪುತ್ತಿದ್ದಾರೆ, ಪ್ರತೊಯೊಬ್ಬರೂ ಸೊಳ್ಳೆ ಸಮಸ್ಯೆಯಿಂದ ಮುಕ್ತಿ ಹೊಂದಲು ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಸಲಹೆ ನೀಡಿದರು.

ತಾಲೂಕಿನ ಆನೆಗೊಂದಿ ಗ್ರಾಮದ
ಸರಕಾರಿ ಪ್ರೌಢಶಾಲೆ ಆವರಣದಲ್ಲಿ
ತಾಲೂಕ ಕಾನೂನು ಸೇವಾ ಸಮಿತಿ, ಗಂಗಾವತಿ. ವಕೀಲರ ಸಂಘ, ಗಂಗಾವತಿ, ಗ್ರಾಮ ಪಂಚಾಯತ್ ಆನೆಗುಂದಿ ಇತರೆ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಹಿ ಸೇವಾ 2024ರ ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ ಅಭಿಯಾನದಡಿಯಲ್ಲಿ ತಾಲೂಕ ಕಾನೂನು ಸೇವಾ ಸಮಿತಿ,ಗಂಗಾವತಿ ಇವರಿಂದ ಬುಧವಾರ ಆಯೋಜಿಸಿದ್ದ “ಆನೆಗುಂದಿ ಗ್ರಾಮ ದತ್ತು ಸ್ವೀಕಾರ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂವಿಧಾನ ಹಕ್ಕುಗಳ ಜೊತೆ ಕರ್ತವ್ಯಗಳನ್ನು ನೀಡಿದ್ದು, ನಮ್ಮ ಕರ್ತವ್ಯಗಳನ್ನು ಎಲ್ಲರೂ ಪಾಲಿಸಬೇಕು. ಆನೆಗೊಂದಿ ಪರಂಪರೆ ಕಾಪಾಡಿಕೊಳ್ಳುವುದು ಎಲ್ಲರ ಹಕ್ಕಾಗಿದೆ. ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಗಾಣಿಗೇರ ಅವರು ಮಾತನಾಡಿ, ಗ್ರಾಮದಲ್ಲಿ 570 ಕ್ಕೂ ಹೆಚ್ಚು ಸಮಸ್ಯೆಗಳು ಇರುವುದು ಕಾನೂನು ಮಹಾವಿದ್ಯಾಲಯ ವಿದ್ಯಾರ್ಥಿಗಳು ಅಧ್ಯಯನ ಮಾಡಿ, ಮಾಹಿತಿ ನೀಡಿದ್ದರಿಂದ ಗ್ರಾಮವನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂದರು.

ಹಾಸ್ಯ ಕಲಾವಿದ ಪ್ರಾಣೇಶ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲಬಹದ್ದೂರ್ ಶಾಸ್ತ್ರಿ ಅವರ ಆದರ್ಶ ಗುಣಗಳನ್ನು ಎಲ್ಲರೂ ಪಾಲಿಸಬೇಕು. ಪಾಲಕರು ಮಕ್ಕಳಲ್ಲಿ ಸಂಸ್ಕಾರ ಕಲಿಸಬೇಕು. ಮಕ್ಕಳಿಗೆ ಸಾಹಿತ್ಯ ಓದುವ ಅಭ್ಯಾಸ ಬೆಳೆಸಬೇಕು ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ನಾಗೇಶ ಪಾಟೀಲ್ ಅವರು ಮಾತನಾಡಿದರು. ಪ್ರಾಸ್ತಾವಿಕವಾಗಿ ವಕೀಲರ ಸಂಘದ ಕಾರ್ಯದರ್ಶಿಗಳಾದ ಎಚ್ ಎಂ ಮಂಜುನಾಥ ಅವರು ಮಾತನಾಡಿದರು.

ಶ್ರಮದಾನ : ಆನೆಗೊಂದಿ ಗ್ರಾಮದ ಕೃಷ್ಣದೇವರಾಯ ವೃತ್ತದ ಬಳಿ ತಾಲೂಕ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಎಲ್ಲ ಅಧಿಕಾರಿಗಳು ಹಾಗೂ ಗಂಗಾವತಿ ಚಾರಣ ಬಳಗ,  ಕಿಷ್ಕಿಂದ ಯುವ ಚಾರಣ ಬಳಗದವರು ಸ್ವಚ್ಛತಾ ಕಾರ್ಯ ಕೈಗೊಂಡರು. ನಂತರ ಗ್ರಾಪಂ ಸ್ವಚ್ಛತಾ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಿದರು.

ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ದಾಸೋಹರತ್ನ ಬ್ರಹ್ಮನಂದ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದರು.
ಗ್ರಾಪಂ ಅಧ್ಯಕ್ಷರಾದ ಮಹಾದೇವಿ ತಿಮ್ಮಪ್ಪ ಬಾಳೆಕಾಯಿ ಅವರು ಅಧ್ಯಕ್ಷತೆ ವಹಿಸಿದ್ದರು.

ರಾಜವಂಶಸ್ಥರಾದ ಲಲಿತರಾಣಿ ಶ್ರೀರಂಗದೇವರಾಯಲು, ರಾಜ ಹರಿಹರ ದೇವರಾಯಲು, ರತ್ನಶ್ರೀ ಕೃಷ್ಣದೇವರಾಯ, ಕಿಷ್ಕಿಂದ ಟ್ರಸ್ಟ್ ಕಾರ್ಯದರ್ಶಿ ಡಾ.ಎ.ಸೋಮರಾಜು, ಹಾಸ್ಯ ಕಲಾವಿದ ಪ್ರಾಣೇಶ, ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ, ಡಿವೈಎಸ್ಪಿ ಸಿದ್ಧಲಿಂಗಪ್ಪಗೌಡ ಪೊಲೀಸ ಪಾಟೀಲ, ಗಂಗಾವತಿ ಚಾರಣ ಬಳಗ ಸಂಚಾಲಕ ಡಾ.ಶಿವಕುಮಾರ ಮಾಲಿ ಪಾಟೀಲ, ವಕೀಲರ ಸಂಘದ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಮುಸಾಲಿ, ತಾಪಂ ಇಓ ಲಕ್ಷ್ಮೀದೇವಿ ಹಾಗೂ ತಾಲೂಕು ಅನುಷ್ಠಾನ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಪಂ ಸದಸ್ಯರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago