Breaking News

ಹನೂರು ತಾಲ್ಲೂಕಿನಲ್ಲಿ ದೊಡ್ಡಾಲತ್ತೂರು ಗ್ರಾಮದಲ್ಲಿಮೈಸೂರು ವಿವಿಯಿಂದ 2 ಸಾವಿರ ವರ್ಷಗಳಷ್ಟು ಹಳೆಯ ಸಮಾಧಿಗಳ ಉತ್ಖನನ ಆರಂಭ.

At Doddalathur Village in Hanur Taluk Excavation of 2000 year old tombs started from Mysore University.

ಜಾಹೀರಾತು


ವರದಿ : ಬಂಗಾರಪ್ಪ ಸಿ‌.
ಹನೂರು :ತಾಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ನೂರಾರು ಸಂಖ್ಯೆಯಲ್ಲಿ ಕಬ್ಬಿಣ ಯುಗದ ಸಮಾಧಿಗಳಿದ್ದು 2000-2500 ವರ್ಷಗಳಾದ್ದಾಗಿದೆ‌.‌ ಸ್ಥಳೀಯಯವಾಗಿ ಇದನ್ನು ಪಾಂಡವರ ಮನೆ ಎಂದು ಕರೆಯಲಾಗುತ್ತಿದ್ದು,
ಬಂಡೆಕಲ್ಲ‌ಗಳನ್ನು ಸುತ್ತಲೂ ಜೋಡಿಸಿ ಮಧ್ಯದಲ್ಲಿ ಕಲ್ಲಿನ ರಾಶಿಗಳನ್ನು ಗುಪ್ಪೆ ಥರಾ ಮಾಡಲಾಗಿದೆ. ಇಂದಿನಿಂದ ಈ ಸಮಾಧಿಗಳ ಉತ್ಖನನ ಕಾರ್ಯ ಆರಂಭಗೊಂಡಿದೆ.
ಸಂಶೋಧನೆಯಲ್ಲಿ‌
ಮೈವಿವಿಯ ಪ್ರಾಚೀನ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿ ಶೋಭಾ ನೇತೃತ್ವದಲ್ಲಿ 20 ಕ್ಕೂ ಅಧಿಕ ಸಂಶೋಧಕರು, ವಿದ್ಯಾರ್ಥಿಗಳು ಈ ಉತ್ಖನನ ಕಾರ್ಯದಲ್ಲಿ ತೊಡಗಿದ್ದಾರೆ.

1961 ರಲ್ಲಿ ಭಾರತೀಯ ಪುರಾತತ್ತ್ವ ಇಲಾಖೆ ವತಿಯಿಂದ ಈ ಸಮಾಧಿಗಳನ್ನು ಕೃಷ್ಣಮೂರ್ತಿ ಎಂಬವರು ಗುರುತು ಮಾಡಿದ್ದರು. ಆದಾದ ಬಳಿಕ ಸಂಶೋಧನಾ ಕಾರ್ಯ ನಡೆದಿರಲಿಲ್ಲ. ಈಗ , ಉತ್ಖನನ ಆರಂಭಿಸಿದ್ದು ಕಬ್ಬಿಣ ಯುಗದ ಜನರ ನಂಬಿಕೆ ಏನಾಗಿತ್ತು, ಸಮಾಧಿಯಲ್ಲಿ ಅವರು ಯಾವ ವಸ್ತುಗಳನ್ನು ಇಡುತ್ತಿದ್ದರು, ಅವರ ದೃಷ್ಟಿಯಲ್ಲಿ ಸಮಾಧಿ ಅಂದರೆ ಏನಾಗಿತ್ತು, ಸಮಾಧಿ ಒಳಗಡೆ ಎಷ್ಟೆಲ್ಲಾ ವಸ್ತುಗಳನ್ನು ಇಡುತ್ತಿದ್ದರು ಎಂಬ ವಿಚಾರ ಈ ಉತ್ಖನನದಲ್ಲಿ ತಿಳಿಯುವ ನಿರೀಕ್ಷೆ ಇದೆ ಎನ್ನಲಾಗಿದೆ.

About Mallikarjun

Check Also

ಉಳೆನೂರು ಗ್ರಾಮದ ಬಸ್ ನಿಲ್ದಾಣದ ಬಳಿ ಎಐಡಿಎಸ್ಓ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ.

Signature collection campaign led by AIDSSO near the bus stand in Ulenur village. ಸಂಯೋಜನೆ ಹೆಸರಿನಲ್ಲಿ …

Leave a Reply

Your email address will not be published. Required fields are marked *