Breaking News

ಹನೂರು ತಾಲ್ಲೂಕಿನಲ್ಲಿ ದೊಡ್ಡಾಲತ್ತೂರು ಗ್ರಾಮದಲ್ಲಿಮೈಸೂರು ವಿವಿಯಿಂದ 2 ಸಾವಿರ ವರ್ಷಗಳಷ್ಟು ಹಳೆಯ ಸಮಾಧಿಗಳ ಉತ್ಖನನ ಆರಂಭ.

At Doddalathur Village in Hanur Taluk Excavation of 2000 year old tombs started from Mysore University.

ಜಾಹೀರಾತು


ವರದಿ : ಬಂಗಾರಪ್ಪ ಸಿ‌.
ಹನೂರು :ತಾಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ನೂರಾರು ಸಂಖ್ಯೆಯಲ್ಲಿ ಕಬ್ಬಿಣ ಯುಗದ ಸಮಾಧಿಗಳಿದ್ದು 2000-2500 ವರ್ಷಗಳಾದ್ದಾಗಿದೆ‌.‌ ಸ್ಥಳೀಯಯವಾಗಿ ಇದನ್ನು ಪಾಂಡವರ ಮನೆ ಎಂದು ಕರೆಯಲಾಗುತ್ತಿದ್ದು,
ಬಂಡೆಕಲ್ಲ‌ಗಳನ್ನು ಸುತ್ತಲೂ ಜೋಡಿಸಿ ಮಧ್ಯದಲ್ಲಿ ಕಲ್ಲಿನ ರಾಶಿಗಳನ್ನು ಗುಪ್ಪೆ ಥರಾ ಮಾಡಲಾಗಿದೆ. ಇಂದಿನಿಂದ ಈ ಸಮಾಧಿಗಳ ಉತ್ಖನನ ಕಾರ್ಯ ಆರಂಭಗೊಂಡಿದೆ.
ಸಂಶೋಧನೆಯಲ್ಲಿ‌
ಮೈವಿವಿಯ ಪ್ರಾಚೀನ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿ ಶೋಭಾ ನೇತೃತ್ವದಲ್ಲಿ 20 ಕ್ಕೂ ಅಧಿಕ ಸಂಶೋಧಕರು, ವಿದ್ಯಾರ್ಥಿಗಳು ಈ ಉತ್ಖನನ ಕಾರ್ಯದಲ್ಲಿ ತೊಡಗಿದ್ದಾರೆ.

1961 ರಲ್ಲಿ ಭಾರತೀಯ ಪುರಾತತ್ತ್ವ ಇಲಾಖೆ ವತಿಯಿಂದ ಈ ಸಮಾಧಿಗಳನ್ನು ಕೃಷ್ಣಮೂರ್ತಿ ಎಂಬವರು ಗುರುತು ಮಾಡಿದ್ದರು. ಆದಾದ ಬಳಿಕ ಸಂಶೋಧನಾ ಕಾರ್ಯ ನಡೆದಿರಲಿಲ್ಲ. ಈಗ , ಉತ್ಖನನ ಆರಂಭಿಸಿದ್ದು ಕಬ್ಬಿಣ ಯುಗದ ಜನರ ನಂಬಿಕೆ ಏನಾಗಿತ್ತು, ಸಮಾಧಿಯಲ್ಲಿ ಅವರು ಯಾವ ವಸ್ತುಗಳನ್ನು ಇಡುತ್ತಿದ್ದರು, ಅವರ ದೃಷ್ಟಿಯಲ್ಲಿ ಸಮಾಧಿ ಅಂದರೆ ಏನಾಗಿತ್ತು, ಸಮಾಧಿ ಒಳಗಡೆ ಎಷ್ಟೆಲ್ಲಾ ವಸ್ತುಗಳನ್ನು ಇಡುತ್ತಿದ್ದರು ಎಂಬ ವಿಚಾರ ಈ ಉತ್ಖನನದಲ್ಲಿ ತಿಳಿಯುವ ನಿರೀಕ್ಷೆ ಇದೆ ಎನ್ನಲಾಗಿದೆ.

About Mallikarjun

Check Also

ಶ್ರೀ ಶಂಕರ ಬಿದರಿ ರಾಜ್ಯಾಧ್ಯಕ್ಷ ಅಭಾವಿಲಿಮಹಾಸಭಾ ಬಸವ ಜಯಂತಿ ಆಚರಣೆ ಆದೇಶ ಗೊಂದಲ ಬಗ್ಗೆ:

Regarding confusion regarding the order of celebration of Basava Jayanti by Shri Shankar Bidari, State …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.