ಕಲ್ಯಾಣಸಿರಿ ವಿಶೇಷ

ರೈತರ ಜಮೀನುಗಳಿಗೆ ತೆರಳುವ ಸರ್ಕಾರಿ ದಾರಿಯನ್ನುತೆರವುಗೊಳಿಸುವಂತೆ ತಹಾಶೀಲ್ದಾರ್ ರವರಿಗೆ ಛಲವಾದಿ ಮಹಾಸಭಾ ಅಧ್ಯಕ್ಷ ಬಸವರಾಜು ಒತ್ತಾಯ.

Chalawadi Mahasabha President Basavaraju urged the Tehsildar to clear the government road leading to farmers’ lands.

ಹನೂರು : ಪಟ್ಟಣದ ತಾಲೂಕು ದಂಡಾಧಿಕಾರಿ ಗ್ರೂಪ್ ಪ್ರಸಾದ್ ಅವರಿಗೆ ಹುಲ್ಲೆ ಪುರ ಸರ್ವ ನಂಬರ್ ಗಳಲ್ಲಿ ಖಾಸಗಿ ವ್ಯಕ್ತಿಗಳು ಸರ್ಕಾರಿ ದಾರಿಯನ್ನೇ ಮುಚ್ಚಿ ರೈತರ ಜಮೀನುಗಳಿಗೆ ತೆರಳಲು ಹಾಗೂ ಮಳೆ ಬೀಳುತ್ತಿರುವುದರಿಂದ ಕೃಷಿ ಚಟುವಟಿಕೆ ತೊಡಗಿಕೊಳ್ಳಲು ತೊಂದರೆಯಾಗಿರುವ ಬಗ್ಗೆ ಆರ್ ಎಸ್ ದೊಡ್ಡಿ ರೈತ ಶಿವರುದ್ರಪ್ಪ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದ ವೇಳೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ದಾರಿಯನ್ನು ಮುಚ್ಚಿರುವ ಬಗ್ಗೆ ದಂಡಾಧಿಕಾರಿಗಳಿಗೆ ಮನವಿ : ಹುಲ್ಲೇಪುರ ಗ್ರಾಮದ ಸರ್ವೆ ನಂಬರ್ 465 ಜಮಿನಿಗೆ ತೆರಳುವ ಸರ್ಕಾರಿ ರಸ್ತೆಯನ್ನೇ ಖಾಸಗಿ ವ್ಯಕ್ತಿಗಳು ತಮ್ಮ ಪ್ರಭಾವವನ್ನು ಬಳಸಿ ಸರ್ವೆ ನಂಬರ್ 466 467 688/1 ಬಿ , 689 /1 ಎ , ಸರ್ವೇ ನಂಬರ್ 98 , 95/1, 95/2, 96, ರಲ್ಲಿ ಗ್ರಾಮ ನಕಾಶೆ ಯಂತೆ ಸರ್ಕಾರಿ ಪರುಸೇ (ಹಾದಿ.) ದಾರಿಯನ್ನು ವ್ಯಕ್ತಿಗಳು ಮುಚ್ಚಿ ಇರುವುದರಿಂದ ತಲತಲಾಂತರದಿಂದ ಓಡಾಡುತ್ತಿದ್ದ ಸರ್ಕಾರಿ ದಾರಿಯೇ ಇಲ್ಲದೆ ಜಮೀನು ಉಳುಮೆ ಮಾಡಲು ಆಗದೆ ಮಳೆ ಬೀಳುತ್ತಿರುವುದರಿಂದ ಕೃಷಿ ಚಟುವಟಿಕೆ ತೊಡಗಿಕೊಳ್ಳಲು ತೊಡಕಾಗಿದೆ ಉಳಿಮೆ ಮಾಡಲು ಟ್ಯಾಕ್ಟರ್ ಹಾಗೂ ಎತ್ತಿನ ಬಡ್ಡಿ ಓಡಾಡಲು ಸ್ಥಳವಕಾಶವಿಲ್ಲದೆ ಮುಚ್ಚಿರುವ ಸರ್ಕಾರಿ ದಾರಿಯನ್ನು ತಾಲೂಕು ದಂಡಾಧಿಕಾರಿಗಳು ಸಾರ್ವಜನಿಕರಿಗೆ ಬಿಡಿಸುವ ಮೂಲಕ ಅನುಕೂಲ ಕಲ್ಪಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಭರವಸೆ : ಸರ್ಕಾರದ ಆದೇಶದಂತೆ ಸರ್ಕಾರಿ ದಾರಿಯನ್ನು ಯಾರು ಸಹ ಮುಚ್ಚುವಂತಿಲ್ಲ ಹೀಗಾಗಿ ನೀವು ನೀಡಿರುವ ಅರ್ಜಿಯನ್ನು ಪರಿಶೀಲಿಸಿ ಭೂಮಾಪನ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಇದನ್ನು ದೃಢೀಕರಿಸಿ ಸರ್ಕಾರಿ ದಾರಿ ಗ್ರಾಮ ನಕಾಶೆಯಲ್ಲಿ ಇದ್ದರೆ ಯಾವುದೇ ಕಾರಣಕ್ಕೂ ಅಂತಹವರು ದಾರಿಯನ್ನು ಮುಚ್ಚುವಂತಿಲ್ಲ ಹೀಗಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು…

ಇದೇ ವೇಳೆಯಲ್ಲಿ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಬಸವರಾಜ್ ಬಿಜೆಪಿ ಮುಖಂಡ ಹಾಗೂ ಚಂಗವಾಡಿ ರಾಜು ಮತ್ತು ರೈತ ಮುಖಂಡ ಶಿವರುದ್ರಪ್ಪ ಹಾಗೂ ಇನ್ನಿತರ ರೈತರು ಉಪಸ್ಥಿತರಿದ್ದರು…

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago