Breaking News

ತುಂಗಭದ್ರಾತುಂಗಭದ್ರಾ ಎಡದಂಡೆ 69 ನೇ ಮೈಲಿನ ಕೆಳಭಾಗದ ಉಪ ಕಾಲುವೆಗಳಲ್ಲಿ ಸಮರ್ಪಕ ನೀರಿನ ಹರಿವಿನ ಬಗ್ಗೆ ಕ್ರಮ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು

Take action on adequate water flow in sub-canals downstream of TungabhadraTungabhadra left bank 69th mile: Minister NS Bhosaraju

ಜಾಹೀರಾತು
IMG 20241009 WA0430 Scaled


ಬೆಂಗಳೂರು ಅ. 09 : ತುಂಗಭದ್ರಾ ಎಡದಂಡೆ 69 ನೇ ಮೈಲಿನ ಕೆಳಭಾಗದ ಉಪ ಕಾಲುವೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವ ಕಾರಣ, ಸಿರವಾರ ಹಾಗೂ ರಾಯಚೂರು ವಿಭಾಗದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಸೂಚಿಸಿದರು.
ಇಂದು ಕರ್ನಾಟಕ ರಾಜ್ಯ ನೀರಾವರಿ ನಿಗಮದ ಕಚೇರಿಯಲ್ಲಿ ಮಾನ್ಯ ಮಾನ್ವಿ ಶಾಸಕರಾದ ಹಂಪಯ್ಯ ನಾಯಕ, ಕೆಎನ್‌ಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕರು ರಾಜೇಶ್‌ ಅಮ್ಮಿನಬಾವಿ, ಮುಖ್ಯ ಅಭಿಯಂತರರು ಹಾಗೂ ಅಧಿಕಾರಿಗಳೊಂದಿಗೆ ವಿಸ್ತ್ರುತ ಸಭೆ ನಡೆಸಿ ನೀರಿನ ಹರಿವಿನ ವಿಷಯಗಳ ಬಗ್ಗೆ ಚರ್ಚಿಸಿದರು.
ಸಿರವಾರ ಹಾಗೂ ರಾಯಚೂರು ವಿಭಾಗದಲ್ಲಿರುವ ತುಂಗಭದ್ರಾ ಎಡದಂಡೆ ಕಾಲುವೆ 69 ನೇ ಮೈಲಿನ ಉಪಕಾಲುವೆಗಳಲ್ಲಿ ನೀರಿನ ಹರಿವು ಬಹಳ ಕಡಿಮೆಯಾಗಿದೆ. ಇದರಿಂದ ಈ ಭಾಗದ ರೈತರಿಗೆ ಬಹಳ ಅನಾನುಕೂಲವಾಗುತ್ತಿದೆ. ಸರಿಯಾದ ಮಟ್ಟದಲ್ಲಿ ಹಾಗೂ ಪ್ರಮಾಣದಲ್ಲಿ ನೀರು ಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕಾಗಿದೆ. ಇದರಿಂದ ಈ ಭಾಗದ ರೈತರು ತನ್ನ ಕೃಷಿ ಚಟುವಟಿಕೆಯನ್ನು ನಡೆಸಲು ಸಾಧ್ಯವಾಗಲಿದೆ ಎಂದು ಸಚಿವರು ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಧಿಕಾರಿಗಳು ನಿಗದಿತ ನೀರಿನ ಹರಿವಿನ ಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಉಪಕಾಲುವೆಗಳಲ್ಲಿ ನೀರು ಹರಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆಯೂ ಇದೇ ಸಂಧರ್ಭದಲ್ಲಿ ಸಚಿವರು ಸೂಚಿಸಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.