Belagavi-Manuguru Express train service will start from 16: Dr. Baburao
ರಾಯಚೂರು: ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಮುಣುಗೂರ ಎಕ್ಸಪ್ರೆಸ್ ರೈಲ್ವೆ ಸಂಚಾರವನ್ನು ಪುನರಾರಂಭಿಸಲು ರೈಲ್ವೆ ಇಲಾಖೆ ಮುಂದಾಗಿದೆ ಎಂದು ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಡಾ.ಬಾಬುರಾವ್ ಅವರು ತಿಳಿಸಿದ್ದಾರೆ.
ರೈಲ್ವೆ ಸಂಖ್ಯೆ 07335/07336 ಬೆಳಗಾವಿಯಿಂದ ವಾರದಲ್ಲಿ ರವಿವಾರ, ಬುಧವಾರ, ಶನಿವಾರ, ಮಂಗಳವಾರ ನಾಲ್ಕು ದಿನ ಬೆಳಗಾವಿಯಿಂದ ಸಂಚರಿಸುವ ರೈಲು ಮುಣುಗೂರಿನಿಂದ ವಾರದಲ್ಲಿ ಸೋಮವಾರ, ಗುರುವಾರ, ರವಿವಾರ ಮತ್ತು ಬುಧವಾರ ಸಂಚರಿಸಲಿದೆ.
ಈ ರೈಲು ಗದಗ, ಹೊಸಪೇಟೆ, ಬಳ್ಳಾರಿ, ಗುಂತಕಲ್, ಮಂತ್ರಾಲಯಂ, ರಾಯಚೂರು, ಯಾದಗಿರಿ, ಚಿತ್ತಾಪೂರ, ಸಿಕಂದ್ರಬಾದ್ ಗಳಲ್ಲಿ ನಿಲುಗಡೆಯಾಗಲಿದೆ. ಅ.16ರಂದು ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿರುವ ಡಾ. ಬಾಬುರಾವ್ ಅವರು, ಇತ್ತೀಚೆಗೆ ರಾಯಚೂರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಆಗಮಿಸಿದ್ದ ವೇಳೆ ಈ ರೈಲು ಸಂಚಾರವನ್ನು ಪುನರಾರಂಭಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು. ಮನವಿ ಸ್ಪಂದಿಸಿರುವ ಸಚಿವರು ಈಗ ಪ್ರಯಾಣಿಕರ ಅನುಕೂಲಕ್ಕೆ ರೈಲು ಓಡಿಸಲು ನಿರ್ಧರಿಸಿದ್ದು ಸ್ವಾಗತಾರ್ಹವಾಗಿದೆ. ಹಾಗೂ ಸಚಿವರು ಅಭಿನಂದನಾರ್ಹರಾಗಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…