Dussehra: A grand jumbo ride in Hemagudda
ಕೊಪ್ಪಳ : ವಿಜಯದಶಮಿ ಶರನ್ನವರಾತ್ರಿ ಪ್ರಯುಕ್ತ ಗಂಗಾವತಿ ತಾಲೂಕಿನ ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಒಂಭತ್ತು ದಿನಗಳ ಕಾಲ ವಿಷೇಶ ಅಭಿಷೇಕ, ಕುಂಕುಮಾರ್ಚನೆ ಹಾಗೂ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ನಡೆದವು.
ನವರಾತ್ರಿ ಅಂಗವಾಗಿ ಶುಕ್ರವಾರ ಸಾಯಂಕಾಲ ಪ್ರತಿ ವರ್ಷದ ಪದ್ದತಿಯಂತೆ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ವಿಷೇಶವಾಗಿ ಅಲಂಕೃತಗೊಂಡ ದುರ್ಗಾಪರಮೇಶ್ವರಿಯ ಭಾವಚಿತ್ರವಿಟ್ಟು ಜಂಬೂ ಸವಾರಿಯನ್ನು ಮುಖ್ಯ ದ್ವಾರಗಳಲ್ಲಿ ನೆರವೇರಿಸಲಾಯಿತು.
ಗೋಧೂಳಿ ಸಮಯದಲ್ಲಿ ದೇವಸ್ಥಾನದ ಆವರಣದಲ್ಲಿ ಅಂಬಾರಿ ಹೊತ್ತು ನಿಂತಿದ್ದ ಆನೆಗೆ ಪೂಜೆ ಸಲ್ಲಿಸುವ ಮೂಲಕ ದೇವಸ್ಥಾನದಿಂದ ಹೊರಟ ಈ ಅಂಬಾರಿ ಮೆರವಣಿಗೆಗೆ ಮಾಜಿ ಸಂಸದ ಎಚ್.ಜಿ. ರಾಮುಲು ಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ ನೀಡಿದರು.
ನಂತರ ಹೊರಟ ಮೆರವಣಿಗೆಯು ಆಂಜನೇಯ ದೇವಸ್ಥಾನದ ಪಾದಗಟ್ಟೆಗೆ ತಲುಪಿ ಮರಳಿ ದೇವಸ್ಥಾನಕ್ಕೆ ಆಗಮಿಸಿತು.
ಈ ವೇಳೆ ವಿವಿಧ ಜನಪದ ಕಲಾತಂಡಗಳು, ವಾಧ್ಯ ಮೇಳ, ಮಹಿಳೆಯರ ಕಳಸ ಕನ್ನಡಿಗಳು ಜಂಬೂ ಸವಾರಿಯೊಂದಿಗೆ ಭಕ್ತಾಧಿಗಳ ಜಯಘೋಷದೊಂದಿಗೆ ಹೆಜ್ಜೆ ಹಾಕಿದ್ದು ನೋಡುಗರ ಕಣ್ಮನ ಸೂರೆಗೊಂಡವು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್.ಆರ್ ಶ್ರೀನಾಥ, ನೇತೃತ್ವದಲ್ಲಿ ಜಂಬೂ ಸವಾರಿ ಹಾಗೂ ನವರಾತ್ರಿಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನೆರವೇರಿದವು.
ದೇವಸ್ಥಾನದಲ್ಲಿ ಶುಕ್ರವಾರದಂದು ಉಚಿತ ಸಾಮೂಹಿಕ ವಿವಾಹ ಹಮ್ಮಿಕೊ ಳ್ಳಲಾಗಿತ್ತು ಈ ಸಂದರ್ಭದಲ್ಲಿ ದುರ್ಗಾದೇವಿ ಸನ್ನಿಧಿಗೆ ಶಾಸಕ ಜನಾರ್ದನರೆಡ್ಡಿ, ಸಂಸದ ರಾಜಶೇಖರ ಹಿಟ್ನಾಳ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕರಿಯಣ್ಣ ಸಂಗಟಿ, ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೋಂಡು ಶ್ರೀ ದೇವಿಯ ದರ್ಶನಾಶಿರ್ವಾದ ಪಡೆದರು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…