ಕಲ್ಯಾಣಸಿರಿ ವಿಶೇಷ

ಕೊಟ್ಟೂರು ಪಟ್ಟಣ ಪಂಚಾಯಿತಿಯ ದಿನನಿತ್ಯ ಓಡಾಡುವ ಸರಕಾರಿ ಕಛೇರಿಯ ವಾಹನಗಳಿಗೆ ಇಲ್ಲ ಇನ್ಸೊರೆನ್ಸ್

There is no insurance for the government office vehicles that ply daily in Kottur Town Panchayat

ಅಮಾಯಕ ನೌಕರರ ಜೀವದ ಜೊತೆ ಚೆಲ್ಲಾಟ..!

ಪಟ್ಟಣ ಪಂಚಾಯತಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೂರೆನ್ಸ್ ಮೇಲಾಧಿಕಾರಿಗಳ  ಮೌನ। ಸಾರ್ವಜನಿಕರ ಆಕ್ರೋಶ

ಕೊಟ್ಟೂರು:- ಕೊಟ್ಟೂರು ಪಟ್ಟಣ ಪಂಚಾಯತಿಯ ದಿನ ನಿತ್ಯ ಉಪಯೋಗಿಸೋ ಎಷ್ಟೋ ವಾಹನಗಳಿಗಿಲ್ಲ ಇನ್ಸೂರೆನ್ಸ್, ಕಳೆದ ವರ್ಷಗಳಲ್ಲೇ ಇನ್ಸೊರೆನ್ಸ್ ಮುಗಿದರು ಸಹ ಇನ್ನೂ ವಿಮೆ‌ ನವೀಕರಣ ಮಾಡದೇ ಅಮಾಯಕ ನೌಕರರ ಜೀವದ ಜೊತೆ ಚಲ್ಲಟವಾಡುತ್ತಿರುವ ಪಟ್ಟಣ ಪಂಚಾಯಿತಿ ಅಧಿಕಾರಿಗಳು. ಪಟ್ಟಣ ಪಂಚಾಯತಿಯಲ್ಲಿ ನಿರುಪಯೋಕ್ತವಾಗಿರುವ ವಾಹನಗಳಿಗೆ ಇನ್ಸೋರೆನ್ಸ್ ಅವಶ್ಯಕತೆ ಇಲ್ಲ ಆದರೂ ಇಂತಹ ವಾಹನಗಳಿಗೆ ಇನ್ಸೋರೆನ್ಸ್  ಮಾಡಿಸಿದ್ದಾರೆ ಎಂಬ ಬಿಸಿ-ಬಿಸಿ ಚರ್ಚೆ ಇದೀಗ ಪಟ್ಟಣದಲ್ಲಿ‌ ಚರ್ಚೆಯಾಗುತ್ತಿದೆ. ಇದಕ್ಕೆ ಅಧಿಕಾರಿಗಳೆ ಉತ್ತರ ಕೊಡಬೇಕಿದೆ.
ನಾವು ದಿನನಿತ್ಯ ಓಡಾಡುವ ವಾಹನಗಳಿಗೆ ಇನ್ಸೂರೆನ್ಸ್, ಸರಿಯಾದ ದಾಖಲೆಗಳು ಇಲ್ಲ ಕಾನೂನು ಉಲ್ಲಂಘನೆಯಾಗಿದೆ ಎಂದು ಜನ ಸಾಮಾನ್ಯನಿಗೆ ದಂಡದ ರೂಪದಲ್ಲಿ  ಕೋಟ್ಯಂತರ ಹಣ ವಸೂಲಿ‌ ಮಾಡ್ತಾರೆ. ಆದರೆ ಕಾನೂನು ಪಾಲಿಸುವ ಸರ್ಕಾರಿ ಇಲಾಖೆ ಅಧಿಕಾರಿಗಳಿಂದಲೆ ಕಾನೂನು ಉಲ್ಲಂಘನೆಯಾಗ್ತಿದೆ. ಭಾಗದಷ್ಟು ಹೊರ ಬೀಳುತ್ತದೆ ಭ್ರಷ್ಟಾಚಾರ ಹಾಗೂ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷೆ

ಜನರಿಗೊಂದು ನ್ಯಾಯ ಅಧಿಕಾರಿಗಳಿಗೊಂದು ನ್ಯಾಯ ಎನ್ನುವಂತಾಗಿದೆ.  ಪಟ್ಟಣ ಪಂಚಾಯತಿ ಕಛೇರಿಯ ಸಾರ್ವಜನಿಕರಿಗೆ, ಪಟ್ಟಣದ ಸ್ವಚ್ಚತೆ ಇತರೇ ಕಾರ್ಯಗಳಿಗೆ ಉಪಯೋಗಿಸುವ ಅನೇಕ ಸರ್ಕಾರಿ ವಾಹನಗಳು ವಿಮೆರಹಿತವಾಗಿವೆ.
ಇಲ್ಲಿನ ಅನೇಕ ವಾಹನಗಳಿಗೆ ಕಳೆದ  ವರ್ಷದ ಹಿಂದೆಯೇ ವಾಹನ ವಿಮೆ ಮುಗಿದಿದೆ.

ಒಟ್ಟಿನಲ್ಲಿ ಸರ್ಕಾರಿ ವಾಹನಗಳಿಗೆ ಇನ್ಸುರೆನ್ಸ್ ತುಂ‌ಬುವ ಮೂಲಕ  ಜವಾಬ್ದಾರಿ ಮೆರೆಯಬೇಕಾಗಿದ್ದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು. ಸಾರ್ವಜನಿಕರು ಕೂಡ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುವಂತಾಗಿದೆ. ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸರ್ಕಾರಿ ಎಲ್ಲಾ ವಾಹನಗಳಿಗೆ ವಿಮೆ ಮಾಡಿಸುವ ಮೂಲಕ ಕಾನೂನು ಪಾಲಿಸುತ್ತಾರೋ  ಇಲ್ಲವೋ ಅನ್ನುವುದನ್ನು ಕಾದು ನೀಡಬೇಕಾಗಿದೆ.ಎಂದು ಕಿರಣ್ ಕುಮಾರ್, ಮಂಜುನಾಥ್, ಅಂಜಿನಿ, ಚಂದ್ರಶೇಖರ್ ಪತ್ರಿಕೆಗೆ ಮಾಹಿತಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago