Breaking News

ದಸರಾಹಬ್ಬದಅಂಗವಾಗಿ ಸುಮಂಗಲಿಯರಿಂದ ನೂತನ ರಥೋತ್ಸವ


A new chariot festival from Sumangali as part of Dussehra festival

ಜಾಹೀರಾತು
IMG 20241016 WA0012

ಮಾನ್ವಿ: ಪಟ್ಟಣದ ಜಯನಗರದಲ್ಲಿನ ಸಂಗಾಪುರ ಖಿದ್ಮತ್ ಹಿರೇಮಠ ಶಾಖಮಠದಲ್ಲಿ ದಸರಾ ಹಬ್ಬದ ಅಂಗವಾಗಿ ನಡೆದ ೩೩ನೇ ವರ್ಷದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವ ಹಾಗೂ ೩೨೪ ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ನೂತನ ರಥೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ರಾಯಚೂರು ೧೦೮ ಸಾವಿರ ದೇವರ ಸಂಸ್ಥಾನ ಕಿಲ್ಲೇ ಬೃಹನ್ಮಠ ಶ್ರೀ .ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವಾಚನ ನೀಡಿ ದಸರಾ ಹಬ್ಬವು ನಾಡ ಹಬ್ಬವಾಗಿದ್ದು ನವರಾತ್ರಿಯ ೯ ದಿನಗಳ ಕಾಲ ದೇವಿಯನ್ನು ಪೂಜಿಸಿದಲ್ಲಿ ಇಷ್ಟಾರ್ಥಗಳು ಸಿದ್ದಿಯಾಗುತ್ತವೆ ಹಾಗೂ ಜೀವನದಲ್ಲಿ ಯಶಸ್ಸು ದೊರೆಯುವುದರಿಂದ ಭಕ್ತಿ ಭಾವದಿಂದ ದೇವಿಯನ್ನು ಆರಾದಿಸುವಂತೆ ತಿಳಿಸಿದರು.
೩೨೪ ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮ ನಡೆಯಿತು. ಶ್ರೀದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ರಥದಲ್ಲಿ ಕೂಡಿಸಿದ ನಂತರ ನೂತನ ರಥಕ್ಕೆ ಶ್ರೀ .ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ನೂರಾರು ಮಹಿಳೆಯರು ನೂತನ ರಥವನ್ನು ಎಳೆಯುವ ಮೂಲಕ ರಥೋತ್ಸವ ನೆರವೇರಿಸಿದರು. ಸುತ್ತಮುತ್ತಲಿನ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದರು. ವೀರಗಾಸೆ ಕಲಾವಿದರಾದ ಯದ್ದಲದಿನ್ನಿಯ ಹೆಚ್.ಎಂ.ಸಿದ್ದರಾಮಯ್ಯಸ್ವಾಮಿ ಯವರಿಂದ ಪುರವಂತಿಕೆ ಪ್ರದರ್ಶನ ನಡೆಯಿತು.
ಸಂಗಾಪುರ ಹಿರೇಮಠದ ಶ್ರೀ ವೀರಭದ್ರಯ್ಯಸ್ವಾಮಿಗಳು, ಶ್ರೀ ಶರಭಯ್ಯ ಶಾಸ್ತ್ರಿಗಳು, ದೇವಿ ಉಪಾಸಕರಾದ ಮರಿಸ್ವಾಮಿ,ಮುದ್ದಯ್ಯಸ್ವಾಮಿ,ಸೇರಿದಂತೆ ಇನ್ನಿತರರು ಇದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.