A new chariot festival from Sumangali as part of Dussehra festival
ಮಾನ್ವಿ: ಪಟ್ಟಣದ ಜಯನಗರದಲ್ಲಿನ ಸಂಗಾಪುರ ಖಿದ್ಮತ್ ಹಿರೇಮಠ ಶಾಖಮಠದಲ್ಲಿ ದಸರಾ ಹಬ್ಬದ ಅಂಗವಾಗಿ ನಡೆದ ೩೩ನೇ ವರ್ಷದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವ ಹಾಗೂ ೩೨೪ ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ನೂತನ ರಥೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ರಾಯಚೂರು ೧೦೮ ಸಾವಿರ ದೇವರ ಸಂಸ್ಥಾನ ಕಿಲ್ಲೇ ಬೃಹನ್ಮಠ ಶ್ರೀ .ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವಾಚನ ನೀಡಿ ದಸರಾ ಹಬ್ಬವು ನಾಡ ಹಬ್ಬವಾಗಿದ್ದು ನವರಾತ್ರಿಯ ೯ ದಿನಗಳ ಕಾಲ ದೇವಿಯನ್ನು ಪೂಜಿಸಿದಲ್ಲಿ ಇಷ್ಟಾರ್ಥಗಳು ಸಿದ್ದಿಯಾಗುತ್ತವೆ ಹಾಗೂ ಜೀವನದಲ್ಲಿ ಯಶಸ್ಸು ದೊರೆಯುವುದರಿಂದ ಭಕ್ತಿ ಭಾವದಿಂದ ದೇವಿಯನ್ನು ಆರಾದಿಸುವಂತೆ ತಿಳಿಸಿದರು.
೩೨೪ ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮ ನಡೆಯಿತು. ಶ್ರೀದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ರಥದಲ್ಲಿ ಕೂಡಿಸಿದ ನಂತರ ನೂತನ ರಥಕ್ಕೆ ಶ್ರೀ .ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ನೂರಾರು ಮಹಿಳೆಯರು ನೂತನ ರಥವನ್ನು ಎಳೆಯುವ ಮೂಲಕ ರಥೋತ್ಸವ ನೆರವೇರಿಸಿದರು. ಸುತ್ತಮುತ್ತಲಿನ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದರು. ವೀರಗಾಸೆ ಕಲಾವಿದರಾದ ಯದ್ದಲದಿನ್ನಿಯ ಹೆಚ್.ಎಂ.ಸಿದ್ದರಾಮಯ್ಯಸ್ವಾಮಿ ಯವರಿಂದ ಪುರವಂತಿಕೆ ಪ್ರದರ್ಶನ ನಡೆಯಿತು.
ಸಂಗಾಪುರ ಹಿರೇಮಠದ ಶ್ರೀ ವೀರಭದ್ರಯ್ಯಸ್ವಾಮಿಗಳು, ಶ್ರೀ ಶರಭಯ್ಯ ಶಾಸ್ತ್ರಿಗಳು, ದೇವಿ ಉಪಾಸಕರಾದ ಮರಿಸ್ವಾಮಿ,ಮುದ್ದಯ್ಯಸ್ವಾಮಿ,ಸೇರಿದಂತೆ ಇನ್ನಿತರರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…