Breaking News

೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜ್ಯೋತಿ ರಥ ಯಾತ್ರೆ’ಗೆ ಅದ್ದೂರಿ ಸ್ವಾಗತ

A grand welcome to the Jyoti Rath Yatra of the 87th All India Kannada Literary Conference

ಜಾಹೀರಾತು

ಸಿಂಧನೂರು: ಅ 18 ಮಂಡ್ಯ ಜಿಲ್ಲೆಯಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಜನರಲ್ಲಿ ಜಾಗೃತಿ, ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ‘ಕನ್ನಡ ಜ್ಯೋತಿ ರಥ ಯಾತ್ರೆ’ಗೆ ಶುಕ್ರವಾರದಂದು ಸಿಂಧನೂರು ನಗರದಲ್ಲಿ ಭರ್ಜರಿ ಸಂಭ್ರಮದೊಂದಿಗೆ ಸ್ವಾಗತಿಸಲಾಯಿತು.

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಂಗವಾಗಿ ಸಿಂಧನೂರಿಗೆ ಆಗಮಿಸಿದ ಸಮ್ಮೇಳನ ಜ್ಯೋತಿ ಯಾತ್ರೆಗೆ ತಾಲುಕಾಕಸಾಪ ಮತ್ತು ಕನ್ನಡಪರ ಸಂಘಟನೆಗಳು ಹಾಗೂ ತಾಲುಕಾ ಆಡಳಿತ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಆಗಮಿಸಿದ ಜ್ಯೋತಿ ಯಾತ್ರೆ ನಗರದ ಪ್ರಮುಖ ರಸ್ತೆಗಳ ಮುಖಾಂತರ ಭವ್ಯ ಮೇರವಣಿಗೆ ನಡೆಯಿತು, ಈ ಜ್ಯೋತಿ ಮೇರವಣಿಗೆಯಲ್ಲಿ ತಹಿಸಲ್ದಾರರಾದ ಅರುಣ್ ಎಚ್ ದೇಸಾಯಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ,ನಗರಸಭೆ ಪೌರಾಯುಕ್ತರಾದ ಮಂಜುನಾಥ ಗುಂಡೂರ್, ಶಿಶು ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಲಿಂಗನಗೌಡ, ಚಂದ್ರಶೇಖರ್ ಹಿರೇಮಠ, ವೀರೇಶ್ ಗೋನ್ವಾರ್, ಹುಸೇನಪ್ಪ ಅಮರಪುರ್, ಶಿವನಗೌಡ ಗೊರೆಬಾಳ್,
ತಾಲುಕಾ ಕಸಾಪ ಅಧ್ಯಕ್ಷರಾದ ಹಂಪಯ್ಯ ಸ್ವಾಮಿ ಹಿರೇಮಠ, ಕರವೇ ಜಿಲ್ಲಾಧ್ಯಕ್ಷರಾದ ಗಂಗಣ್ಣ ಡಿಶ್, ತಾಲೂಕಾಧ್ಯಕ್ಷ ಲಕ್ಷ್ಮಣ್ ಭೋವಿ, ಲಕ್ಷ್ಮಿ ಪತ್ತಾರ, ಕರವೇ (ಶಿವರಾಮೇ ಗೌಡ ಬಣ) ತಾಲೂಕ ಅಧ್ಯಕ್ಷ ಸುರೇಶ ಗೊಬ್ಬರಕಲ್,ಸೇರಿದಂತೆ ಅನೆಕ ಗಣ್ಯರು ಹಿರಿಯರು ಕಸಾಪ ಅಭಿಮಾನಿಗಳು ಕನ್ನಡಪರ ಸಂಘಟನೆಗಳ ಮುಖಂಡರು ಅಂಗನವಾಡಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.