ಕಲ್ಯಾಣಸಿರಿ ವಿಶೇಷ

ಎರಡು ತಿಂಗಳ ಅನಾಥ ಮಗುವನ್ನು ರಕ್ಷಿಸಿ ನಿಯಮಾನುಸಾರ ಇಲಾಖೆಗೆ ಒಪ್ಪಿಸಿದ ಕಾರುಣ್ಯಾಶ್ರಮ.

Karunyashram rescued a two-month-old orphan and handed it over to the department as per rules.

ಸಿಂಧನೂರು ಆ 18- ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ಆಶ್ರಮದ ಮುಂಭಾಗದಲ್ಲಿ ಅನಾಮಧೇಯ ಮಗು ಪತ್ತೆಯಾಗಿತ್ತು. ಆ ಮಗುವನ್ನು ಆಶ್ರಮದ ಸಿಬ್ಬಂದಿಗಳು ಆ ಮಗುವಿನ ಅನಾರೋಗ್ಯ ಸ್ಥಿತಿಯನ್ನು ಕಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸಿಂಧನೂರಿನ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಮುಖಾಂತರ ಕರ್ನಾಟಕ ಸರ್ಕಾರದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಸರ್ಕಾರಿ ವಿಶೇಷ ದತ್ತು ಸಂಸ್ಥೆ ರಾಯಚೂರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಆಶ್ರಮದ ಆಡಳಿತಾಧಿಕಾರಿ ಡಾ. ಚನ್ನಬಸವ ಸ್ವಾಮಿ ಹಿರೇಮಠ ಮಾತನಾಡಿ. ನಮ್ಮ ಕಾರುಣ್ಯ ಆಶ್ರಮವು ಬರೀ ವೃದ್ಧಾಶ್ರಮ ನಡೆಸುವುದಲ್ಲದೆ ಅದೆಷ್ಟೋ ನೊಂದ ಜೀವಿಗಳ ನಾಡಿ ಮಿಡಿತವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ನ ಅಶೋಕ ನಲ್ಲ ಹಾಗೂ ಜೀವಸ್ಪಂದನಾ ಚಾರಿಟೇಬಲ್ ಟ್ರಸ್ಟ್ ನ ಅವಿನಾಶ ದೇಶಪಾಂಡೆ ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪುರ ಇವರುಗಳ ಜೊತೆಗೂಡಿ ಈ ಮಗುವನ್ನು ರಕ್ಷಿಸಿದೆವು. .ಈ ಮಗುವಿನ ರಕ್ಷಣೆಯಲ್ಲಿ ಹಲವಾರು ಹೋರಾಟಗಾರರು ಸಂಘ ಸಂಘಟನೆಗಳು ನಮಗೆ ನೀಡಿರುವ ಸಹಾಯ ಸಹಕಾರಕ್ಕೆ ಇದೆ. ಎರಡು ತಿಂಗಳುಗಳ ಮಗು ಈ ರೀತಿ ಅನಾಥ- “ವಾಗಿ ನಮ್ಮ ಆಶ್ರಮದಲ್ಲಿ ಇದ್ದಂತಹ ದಿನಗಳನ್ನು ಮರೆಯಲಾಗುತ್ತಿಲ್ಲ ಆದರೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು
ನಾವೆಲ್ಲರೂ ಮೈಗೂಡಿಸಿಕೊಂಡು. ಸಂವಿಧಾನಾತ್ಮಕವಾದ ಕಾನೂನನ್ನು ಪಾಲಿಸುತ್ತಿದ್ದೇವೆ ಎನ್ನುವ ಆತ್ಮತೃಪ್ತಿ ನಮ್ಮೆಲ್ಲರಿಗಿದೆ ಎಂದರು.

ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾ- ರಿಗಳ ಕಾರ್ಯಾಲಯದ ಹಿರಿಯ ಮೇಲ್ವಿಚಾರಕರಾದ ರೇಣುಕಾ ಮಡಿವಾಳ, ಮಕ್ಕಳ ರಕ್ಷಣೆ ನಿರ್ದೇಶನಾಲಯದ ಶಿಲ್ಪಾ, ಸಿಬ್ಬಂದಿಗಳಾದ ಸುನಿತಾ, ರಜಿಯಾ, ಗುರುರಾಜ ಮುಕ್ಕುಂದಾ,ಶರಣಮ್ಮ, ಮರಿಯಪ್ಪ ಅನೇಕರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago