Road accident near Muttala Cross: One person died.
ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಕುಕನೂರು ತಾಲೂಕಿನ ಶಿರೂರು ಮುತ್ತಾಳ ಕ್ರಾಸ್ ಬಳಿ ಬಸ್ ಹಾಗೂ ದ್ವಿ ಚಕ್ರ ವಾಹನ ಮುಖಾ ಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾನೆ.
ಕುಕನೂರು ಮಂಗಳೂರ ರಸ್ತೆಯ ಮುತ್ತಾಳ ಕ್ರಾಸ್ ಬಳಿ ಈ ಘಟನೆ ಜರುಗಿದ್ದು, ಕುಕನೂರು ಡಿಪೋಗೆ ಸೇರಿದ ಬಸ್ ಇದಾಗಿದ್ದು ಮಂಗಳೂರಿನಿಂದ ಕುಕನೂರು ಕಡೆಗೆ ಬರುತ್ತಿದ್ದ ಬಸ್ ಹಾಗೂ ಕುಕನೂರು ಕಡೆಯಿಂದ ಮಂಗಳೂರು ಕಡೆಗೆ ಹೊರಟಿದ್ದ ದ್ವಿ ಚಕ್ರ ವಾಹನ ಮುಖಾ ಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ನಿಟ್ಟಾಲಿ ಗ್ರಾಮದ ನಿಂಗಪ್ಪ(45) ಗೂಳರಡ್ಡಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಿಂಬದಿ ಸವಾರ ಕಾರ್ತಿಕ (19) ಇಟಗಿ ಗಂಭೀರ ಗಾಯಗೊಂಡಿದ್ದು ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನಾ ಸ್ಥಳಕ್ಕೆ ಕುಕನೂರು ಠಾಣಾ ಪಿಎಸ್ಐ ಟಿ.ಗುರುರಾಜ ಭೇಟಿ ನೀಡಿ ಪರೀಶಿಲನೆ ನಡೆಸಿದರು ಎನ್ನಲಾಗಿದೆ. ಈ ಕುರಿತು ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…