Social activist Alam Pasha is a candidate for the post of Chancellor of Oxford University, London Selected as one of the 38 candidates in the final round
ಬೆಂಗಳೂರು, ಅ, 20; ಲಂಡನ್ ನ ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದ ಚಾನ್ಸಲರ್ ಹುದ್ದೆಗೆ ಸಾಮಾಜಿಕ ಕಾರ್ಯಕರ್ತ ಆಲಂ ಪಾಶ ಅಂತಿಮ ಸುತ್ತಿನ ಅಭ್ಯರ್ಥಿಯಾಗಿ ಹೊರ ಹೊಮ್ಮಿದ್ದಾರೆ.
ಒಟ್ಟು 38 ಅಂತಿಮ ಹಂತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಈ ಪೈಕಿ ಭಾರತೀಯ ಮೂಲದ ಮೂವರು ಆಯ್ಕೆಯಾಗಿದ್ದಾರೆ. ಇವರಲ್ಲಿ ಆಲಂ ಪಾಶ ಸಹ ಮಂಚೂಣಿಯಾಗಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸ್ಪರ್ಧಿಸಿದ್ದರು. ಆದರೆ ಅವರು ಅಂತಿಮ ಹಂತಕ್ಕೆ ಪ್ರವೇಶ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಅಂತಿಮ ಹಂತಕ್ಕೆ ವೈದ್ಯರು, ಶಿಕ್ಷಣ ತಜ್ಞರು, ರಾಜಕಾರಣಿಗಳು ಮತ್ತು ವ್ಯಾಪಾರ ವಲಯದ ಪ್ರಮುಖರು ಆಯ್ಕೆಯಾಗಿದ್ದಾರೆ. ಮಾಜಿ ಕನ್ಸರ್ವೇಟಿವ್ ಪಕ್ಷದ ನಾಯಕ ಲಾರ್ಡ್ ವಿಲಿಯಂ ಹೇಗ್ ಮತ್ತು ಮಾಜಿ ಲೇಬರ್ ಪಕ್ಷದ ಮುಖಂಡ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಆಯ್ಕೆಯಾದ ಹಿರಿಯ ರಾಜಕಾರಣಿಗಳಲ್ಲಿ ಸೇರಿದ್ದಾರೆ. ಇದೀಗ 38 ಅಭ್ಯರ್ಥಿಗಳು ಕಠಿಣ ಮಾನದಂಡಗಳನ್ನು ಪೂರೈಸಬೇಕಾಗಿದೆ.
ಆಲಂ ಪಾಶ ಅವರು ತಮ್ಮ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ್ದು, ಅವರ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಅಂತಿಮ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದಾರೆ. ಹೆಲ್ಪಿಂಗ್ ಸಿಟಿಜನ್ ಸಂಸ್ಥೆಯ ಮೂಲಕ ಅಬಲರಿಗೆ ಕಾನೂನು ನೆರವು ನೀಡುವ ಮೂಲಕ ಅವರನ್ನು ಸಶಕ್ತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವ ಅವರು ಸಾಮಾಜಿಕ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದಾರೆ. ರಾಜಕಾರಣಿಗಳಿಗೆ ಅವರು ಸಿಂಹಸ್ವಪ್ನವಾಗಿದ್ದು, ಹೋರಾಟ ಮತ್ತು ಸಂಘಟನೆ ಅವರ ಬದುಕಿನ ಅವಿಭಾಜ್ಯ ಅಂಗವಾಗಿದೆ.
ಅಧ್ಯಾಪಕರು ಮತ್ತು ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡ ವಿಶ್ವವಿದ್ಯಾನಿಲಯದ ಘಟಿಕೋತ್ಸವವು ಈಗ ಲಾರ್ಡ್ ಪ್ಯಾಟನ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಆನ್ಲೈನ್ ಚುನಾವಣೆಯನ್ನು ನಡೆಸುತ್ತದೆ. ಹಾಂಗ್ ಕಾಂಗ್ನ ಮಾಜಿ ಗವರ್ನರ್ ಲಾರ್ಡ್ ಪ್ಯಾಟನ್ ಟ್ರಿನಿಟಿ ಅವರು ಚಾನ್ಸೆಲರ್ ಆಗಿ ತಮ್ಮ 21 ವರ್ಷಗಳ ಅಧಿಕಾರಾವಧಿಯಿಂದ ಕೆಳಗಿಳಿಯಲಿದ್ದಾರೆ.
ಅಕ್ಟೋಬರ್ 28 ರಂದು ಆರಂಭವಾಗಲಿರುವ ಮೊದಲ ಸುತ್ತಿನ ಮತದಾನದಲ್ಲಿ ಮತದಾರರು ತಮಗೆ ಬೇಕಾದ ಅಭ್ಯರ್ಥಿಗಳಿಗೆ ಶ್ರೇಯಾಂಕ ನೀಡಬಹುದು. ನವೆಂಬರ್ 4 ರಂದು ಘೋಷಿಸಲಿರುವ ಪ್ರಮುಖ ಐದು ಅಭ್ಯರ್ಥಿಗಳು ನವೆಂಬರ್ 18 ರಂದು ನಡೆಯಲಿರುವ ಎರಡನೇ ಸುತ್ತಿನ ಮತದಾನಕ್ಕೆ ಮುನ್ನಡೆಯಲಿದ್ದಾರೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ನೂತನ ಚಾನ್ಸಲರ್ ಯಾರು ಎಂಬುದು ನವೆಂಬರ್ 25 ರಂದು ಬಹಿರಂಗವಾಗಲಿದೆ.
ಕುಲಪತಿಗಳು ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ವಿಧ್ಯುಕ್ತ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರು ಮಹತ್ವದ ಸಮಾರಂಭಗಳ ಅಧ್ಯಕ್ಷತೆ ವಹಿಸುತ್ತಾರೆ ಮತ್ತು ಉಪಕುಲಪತಿಯನ್ನು ಆಯ್ಕೆ ಮಾಡುವ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಈ ಔಪಚಾರಿಕ ಜವಾಬ್ದಾರಿಗಳನ್ನು ಮೀರಿ, ಕುಲಪತಿಗಳು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವ ವಕಾಲತ್ತು, ಸಲಹಾ ಮತ್ತು ನಿಧಿಸಂಗ್ರಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…