Boraiah, a shepherd standing on the support of a tree, was struck by lightning
ಗುಡೇಕೋಟೆ: ಮಳೆ ಗಾಳಿ ಗುಡುಗಿನಿಂದ ರಕ್ಷಣೆ ಪಡೆಯಲು ಮರದ ಆಸರೆ ಪಡೆದ ಕುರಿಗಾಹಿ ಸಿಡಿಲಿಗೆ ಬಲಿಯಾದ ಘಟನೆ ಕೂಡ್ಲಿಗಿ ತಾಲೂಕಿನ ಯರ್ರೋಬಯ್ಯನಹಟ್ಟಿ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ.
ಗುಡೇಕೋಟೆ ಸಮೀಪದ ಯರ್ರೋಬಯ್ಯನಹಟ್ಟಿ ನಿವಾಸಿಯಾದ ಎಸ್.ಬೋರಯ್ಯ (36) ಮೃತ ದುರ್ದೈವಿಗಳು.
ಈತನು ಎಂದಿನಂತೆ ತನ್ನ ಕುರಿಗಳನ್ನು ಮೇಯಿಸಲು ಅರಣ್ಯಕ್ಕೆ ಹೋಗುತ್ತಿದ್ದು,ಸಂಜೆ ಬರುವ ವೇಳೆ ಕಾರ್ಮೋಡ ಕವಿದು ಭಯಂಕರ ಮಳೆ ಸುರಿದಿದೆ. ಗುಡುಗು ಸಿಡಿಲು ಅಬ್ಬರಿಸಿ ಏಕಾಏಕಿ ಮಳೆ ಆರಂಭವಾಗಿದೆ. ರಕ್ಷಣೆ ಪಡೆಯಲು ಕೆಂಜಲುಗುಂಟೆ ಸಮೀಪದ ನೀರಿನ ಬಳಿ ಮರದ ಆಸರೆ ಪಡೆದಿದ್ದರು ಎನ್ನಲಾಗಿದೆ.
ಈ ವೇಳೆ ಸಿಡಿಲು ಬಡಿದು ಎಸ್.ಬೋರಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈತನಿಗೆ ಇಬ್ಬರು ಗಂಡು ಮಕ್ಕಳು, ಪತ್ನಿ ಈಗ ಗರ್ಭಿಣಿಯಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಗುಡೇಕೋಟೆ ಪೋಲೀಸ್ ಠಾಣೆಯ ಪಿಎಸ್ಐ ಸುಬ್ರಮಣ್ಯಂ ಜಿ,ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…