ಕಲ್ಯಾಣಸಿರಿ ವಿಶೇಷ

ಸಾರ್ವಜನಿಕರನ್ನ ದಿನನಿತ್ಯಪರದಾಡಿಸಿದರೆ ನಾನು ಸಹಿಸುವುದಿಲ್ಲ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಎನ್ ಟಿ ಶ್ರೀನಿವಾಸ್ ಶಾಸಕರು

MLA NT Srinivas has given a stern warning to the officials that I will not tolerate if the public is harassed on a daily basis.

ಕೂಡ್ಲಿಗಿ.. ಪಟ್ಟಣದ ಆಡಳಿತ ಕಚೇರಿ ವಿಕಾಸಸೌಧದಲ್ಲಿ ಶಾಸಕರಾದ ಎನ್ ಟಿ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಹೊಸಪೇಟೆ ಸಹಾಯಕ ಆಯುಕ್ತರಾದ ವಿವೇಕಾನಂದ ರವರ ಉಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರು ಗ್ರಾಮೀಣ ಪ್ರದೇಶದಿಂದ ರೈತರು ಬಡವರು ಕೂಲಿಕಾರರು ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದು ತಿಂಗಳಗಟ್ಟಲೆ ಅಲೆದಾಡುತ್ತಿದ್ದು ಯಾವುದೇ ಕೆಲಸಗಳಾಗದೆ ಒಂದು ಕಡೆ ಮಧ್ಯವರ್ತಿಗಳ ಹಾವಳಿ ಇನ್ನೊಂದು ಕಡೆ ಅಧಿಕಾರಿಗಳಿಂದ ಸಾರ್ವಜನಿಕರ ಕೆಲಸ ಮಾಡಲು ಲಂಚದ ಹಾವಳಿ ನಡೆಯುತ್ತಿದ್ದು ಈಗಾಗಲೇ ಸಾರ್ವಜನಿಕರಿಂದ ಅನೇಕ ಅವಾಲುಗಳು ದೂರುಗಳು ನನ್ನ ಗಮನಕ್ಕೆ ಬಂದಿದ್ದು ಪ್ರತಿ ಇಲಾಖೆಯ ಅಧಿಕಾರಿಗಳು ಕೆಲಸ ನಿರ್ವಹಿಸದೆ ಬೇಜವಾಬ್ದಾರಿತನದಿಂದ ಸಾರ್ವಜನಿಕರನ್ನು ಪರದಾಡಿಸುತ್ತಿರುವುದು ಹೆಚ್ಚಾಗಿರುವುದು ಪ್ರತೀ ಇಲಾಖೆಯಲ್ಲಿ ಕಂಡುಬರುತ್ತಿದ್ದು ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು ಉಪ ನೊಂದಾಣೆ ಇಲಾಖೆಯಲ್ಲಿ ಫ್ಯಾನುಗಳಗಾಗಿ ಜಮೀನುಗಳ ನೋಂದಾಣಿ ಸಂದರ್ಭದಲ್ಲಿ ಮಧ್ಯವರ್ತಿಗಳ ದಲ್ಲಾಳಿತನದಿಂದ ಭೂಮಿಕ ಬಳಕೆಯಿಂದ ರೈತರಿಗೆ ಸಾಕಷ್ಟು ಅನ್ಯಾಯವಾಗುತ್ತಿದ್ದು ಇನ್ನೂ ಭೂಮಾಪನ ಇಲಾಖೆಯಲ್ಲಿ ರೈತರ ಜಮೀನಿನ ಅಳತೆ ಮಾಡುವ ನೆಪದಲ್ಲಿ ಅಧಿಕಾರಿಗಳಿಂದ ಸಾಕಷ್ಟು ಹಣ ವಸೂಲಿ ಆಗುತ್ತಿದ್ದು ರೈತರು ಅನ್ಯಾಯಕ್ಕೆ ಒಳಗಾಗುತ್ತಿದ್ದು ವೃದ್ಧರು ವಿಕಲಚೇತನರು ಗೃಹಲಕ್ಷ್ಮಿ ಫಲಾನುಭಾವಿಗಳು ಮಾಸ್ಯಾಸನಕ್ಕಾಗಿ ಅಲೆದಾಟ ನಡೆಯುತ್ತಿದ್ದು ತಾಲೂಕು ಕಚೇರಿಯ ಕೆಲವು ಅಧಿಕಾರಿಗಳಿಂದ ರೈತರ ಬಡವರ ಕೆಲಸಕ್ಕಾಗಿ ಹಣ. ವಸೂಲಿ ಹೆಚ್ಚು ನಡೆಯುತ್ತಿದ್ದು ಗ್ರಾಮ ಲೆಕ್ಕಾಧಿಕಾರಿಗಳಿಂದ ಪಾಣಿ ಖಾತೆ ಬದಲಾವಣೆ ವಂಶವೃಕ್ಷ ಇನ್ನಿತರ ಕೆಲಸಕ್ಕಾಗಿ ಹಣ ಪಡೆದು ಕೆಲಸ ಮಾಡುತ್ತಿದ್ದು ಪ್ರತಿಯೊಬ್ಬ ಅಧಿಕಾರಿಗಳು ಇಂಥ ವ್ಯವಸ್ಥೆಯನ್ನು ಬದಲಿಸಿಕೊಳ್ಳದಿದ್ದರೆ ಅಂತ ಅಧಿಕಾರಿಗಳು ಶಿಕ್ಷ ಅನುಭವಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಶಾಸಕರು ಖಡಕ್ಕಾಗಿ ಎಚ್ಚರಿಸಿದರು

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಮಾನ್ಯ ಸಹಾಯಕ ಆಯುಕ್ತರಾದ ವಿವೇಕಾನಂದ ತಹಶೀಲ್ದಾರರಾದ ಎಂ ರೇಣುಕಾ, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಕಾವಲಿ ಶಿವಪ್ಪ ನಾಯಕ ಉಪತಶೀಲ್ದಾರರಾದ ನೇತ್ರಾವತಿ, ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ಗ್ರಾಮ ಆಡಳಿತ ಅಧಿಕಾರಿಗಳು, ಪ. ಪಂ, ಅಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago