ಕಲ್ಯಾಣಸಿರಿ ವಿಶೇಷ

ಮಹಿಳೆಯರು ಸ್ವಾವಲಂಬಿಗಳಾಗಿ : ಫಾ.ವಿನೋದ ಪೌಲ್

Women as self-reliant: Fr.Vinoda Paul

ಮಾನ್ವಿ: ಪಟ್ಟಣದ ಲೊಯೋಲ ಸಮಾಜ ಸೇವಾ ಕೇಂದ್ರದಲ್ಲಿ ಲೊಯೋಲ ಸಮಾಜ ಸೇವಾ ಕೇಂದ್ರ ಹಾಗೂ ರಾಯಚೂರು ಎಸ್.ಬಿ.ಐ ಗ್ರಾಮೀಣ ತರಬೇತಿ ಕೇಂದ್ರದ ಸಹಯೋಗದಲ್ಲಿ ತಾಲೂಕಿನ ಗ್ರಾಮೀಣಾ ಭಾಗದ ಮಹಿಳೆಯರಿಗೆ ೧೦ ದಿನಗಳ ಜೂಟ್/ಸ್ಲಿಂಗ್ ಬ್ಯಾಗಗಳ ತಯಾರಿಕೆ ತರಬೇತಿ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮವನ್ನು ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾ. ವಿನೋದ ಪೌಲ್ ಅವರು ಈ ದಿನಮಾನಗಳಲ್ಲಿ ಮಹಿಳೆ ಯಾವುದಾದರೂ ಒಂದು ಕೈ ಕೆಲಸವನ್ನು ಕಲಿತಿರಬೇಕು ಹಾಗೂ ಮಹಿಳೆಗೆ ಅಸಾಧ್ಯವಾದ ಕಲಿಕೆ ಯಾವುದು ಇಲ್ಲ. ನೀವು ಕಲಿತ ವಿದ್ಯೆ ಯಾವತ್ತು ನಿಮ್ಮಂದ ದೂರ ಹೋಗಲ್ಲ ಬದಲಾಗಿ ಸದಾ ನಿಮ್ಮ ಬಳಕೆಗೆ ಬರುತ್ತದೆ. ಸರ್ಕಾರವು ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ನಿಷೇಧಿಸಿರುವುದರಿಂದ ಜೂಟ ಬ್ಯಾಗ ಅಥವಾ ಸ್ಲಿಂಗ್ ಬ್ಯಾಗಗಳಿಗೆ ಉತ್ತಮ ಬೇಡಿಕೆ ಜೊತೆಗೆ ಮಾರುಕಟ್ಟೆ ಇರುವುದರಿಂದ ನೀವು ಒಳ್ಳೆಯ ಮತ್ತು ಕ್ವಾಲಿಟಿಯ ವಸ್ತುಗಳನ್ನು ತಯಾರಿಸುವುದರಿಂದ ನಿಮ್ಮ ವಸ್ತುಗಳಿಗೆ ಬೇಡಿಕೆ ಜಾಸ್ತಿಯಾಗುತ್ತದೆ ಎಂದು ಕಿವಿಮಾತು ಹೇಳಿದರು. ನಂತರ ಎಲ್ಲಾ ಶಿಬಿರಾರ್ಥಿಗಳಿಗೆ ಕಲಿಕಾ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಲೊಯೋಲ ಸಮಾಜ ಸೇವಾ ಕೇಂದ್ರದ ನಿರ್ದೇಶಕರಾದ ಫಾ.ಡಾನ್ ಲೋಬೋ. ರಾಯಚೂರು ಎಸ್.ಬಿ.ಐ ಗ್ರಾಮೀಣ ತರಬೇತಿ ಕೇಂದ್ರದ ಸಿಬ್ಬಂಧಿಗಳಾದ ಶ್ರೀ ನರೇಶ ಕುಮಾರ, ತಿಮ್ಮಪ್ಪ ಹಾಗೂ ಶಿಭಿರಾರ್ಥಿಗಳ ಮೌಲ್ಯಮಾಪಕರಾಗಿ ಆಗಮಿಸಿದ್ದ ಶ್ರೀ ಬಸವರಾಜ, ಶ್ರೀ ಅಬ್ದುಲ್ ಮತ್ತು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago