Accused arrested with dry ganja

ಕಾನ ಹೊಸಹಳ್ಳಿ: ಸಮೀಪದ ಬಣವಿಕಲ್ಲು ಗ್ರಾಮದ ಹೆದ್ದಾರಿ 50ರ ಬಳಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗಾಂಜಾ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ರಂಗಸ್ವಾಮಿ ಎಂಬಾತ ಬಂಧಿತ ಆರೋಪಿ. ಆರೋಪಿಯ ಬಳಿಯಲ್ಲಿದ್ದ 2.10 ಕಿ. ಗ್ರಾಂ ಬೀಜ ಸಹಿತ ಒಣ ಗಾಂಜಾ ಹಾಗೂ ದ್ವಿಚಕ್ರವಾಹನ ಜಪ್ತಿ ಮಾಡಿ ಆರೋಪಿಯನ್ನು ದಸ್ತಗಿರಿ, ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಅಬಕಾರಿ ಅಪರ ಆಯುಕ್ತರು (ಅಪರಾಧ) ಕೇಂದ್ರ ಸ್ಥಾನ ಬೆಳಗಾವಿ, ಅಬಕಾರಿ ಜಂಟಿ ಆಯುಕ್ತರು ಹೊಸಪೇಟೆ ವಿಭಾಗ, ಅಬಕಾರಿ ಉಪ ಆಯುಕ್ತರು ವಿಜಯನಗರ ಜಿಲ್ಲೆ, ರವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ವಿಭಾಗದ ನಿರೀಕ್ಷಕರಾದ ಲೋಕೇಶ್, ಸಿಬ್ಬಂದಿಗಳಾದ ಸಂತೋಷ್, ಬಸವರಾಜು ಬಂಗಾರಿ, ಶಂಕರ್ ಗುರುವ ಹಾಗೂ ಚಾಲಕರಾದ ಪ್ರಸನ್ನಕುಮಾರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Kalyanasiri Kannada News Live 24×7 | News Karnataka
