ಕಲ್ಯಾಣಸಿರಿ ವಿಶೇಷ

ವಿಶ್ವಕರ್ಮಸಂಸ್ಕೃತಿಯನ್ನುಮುಂದಿನಪೀಳಿಗೆಯವರಿಗೆ ಪರಿಚಯಿಸಿ: ಡಾ.ಉಮೇಶ್ ಕಮಾರ್

Introduce Vishwakarma culture to the next generation: Dr.Umesh Kumar

ಬೆಂಗಳೂರು: ವಿಶ್ವಕರ್ಮ ಸಂಸ್ಕೃತಿ ಪರಂಪರೆಯು ಜಗತ್ತಿನ ಅತಿ ಶ್ರೀಮಂತ ಸಂಸ್ಕೃತಿಗಳಲ್ಲಿ ಒಂದಾಗಿದ್ದು, ಅದನ್ನು ಮುಂದಿನ ಪೀಳಿಗೆಯವರಿಗೆ ಸೂಕ್ತ ರೀತಿಯಲ್ಲಿ ಪರಿಚಯಿಸುವ ಅಗತ್ಯವಿದೆ ಎಂದು ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯಾಧ್ಯಕ್ಷರಾದ ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ಕರೆಕೊಟ್ಟರು. ಬೆಂಗಳೂರಿನ ಎಚ್. ಎ. ಎಲ್. ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಮಾಜದವರು ಆಯೋಜಿಸಿದ್ದ “ವಿಶ್ವಕರ್ಮ ಪೂಜ್ಯೋತ್ಸವ” ಸಮಾರಂಭವನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಉಮೇಶ್ ಕುಮಾರ್ ಅವರುವ “ವಿಶ್ವಕರ್ಮ ಸಮಾಜದಲ್ಲಿ ಜನಿಸಿರುವುದಕ್ಕೆ ನಾವೆಲ್ಲ ಬಹಳ ಹೆಮ್ಮೆ ಪಡಬೇಕು. ಏಕೆಂದರೆ ನಮ್ಮಷ್ಟು ಕೌಶಲ್ಯ ಹೊಂದಿದ ಇನ್ನೊಂದು ಸಮುದಾಯವಿಲ್ಲ. ಹಾಗೆಯೇ ನಮ್ಮಷ್ಟು ಶ್ರಮ ಪಡುವ ಇನ್ನೊಂದು ಸಮುದಾಯವೂ ಇಲ್ಲ. ಇತರ ಎಲ್ಲ ಸಮುದಾಯಗಳಿಗಿಂತ ಹೆಚ್ಚಿನ ಕೌಶಲ್ಯವನ್ನು, ಪಂಚ ಕಸುಬುಗಳ ಮೂಲಕ ಭಗವಾನ್ ವಿಶ್ವಕರ್ಮ ದೇವರು ನಮಗೆ ದಯಪಾಲಿಸಿದ್ದಾರೆ. ಆದರೆ ಇಂದಿನ ಆಧುನಿಕ ಜಗತ್ತಿನಲ್ಲಿ ಯುವ ಪೀಳಿಗೆ ಹಾಗೂ ಮಕ್ಕಳಿಗೆ ನಮ್ಮ ಸಂಸ್ಕೃತಿ ಬಗ್ಗೆ ಅರಿವು ಕಡಿಮೆಯಾಗುತ್ತಿದೆ. ಅವರಲ್ಲಿ ಸಂಸ್ಕೃತಿ-ಪರಂಪರೆಯ ಅರಿವನ್ನು ಹೆಚ್ಚು ಮಾಡಿ, ಅವರೂ ಸಹ ತಮ್ಮ ಸಮುದಾಯದ ಬಗ್ಗೆ ಹೆಮ್ಮೆ ಪಡುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಲಲಿತೇಶ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷ ಪ್ರಸನ್ನ, ನರಸಿಂಹ ಖಜಾಂಚಿ ನಂಜುಂಡಸ್ವಾಮಿ ಮುಖಂಡರಾದ ಶಂಕರ್.ಜಿ ಹಾಗೂ ವಿಶೇಷ ಸಂಖ್ಯೆಯಲ್ಲಿ ಬಾಂಧವರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago