Categories: ರಾಜಕೀಯ

ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ 3ನೇ ವರ್ಷದ ಪುಣ್ಯತಿಥಿ

Karnataka Ratna Dr. Puneeth Rajkumar’s 3rd year death anniversary

ಸಹೃದಯ ಶ್ರೀಮಂತ ಹಾಗೂ ನಗುವಿನ ಯವರಾಜ ದಿವಂಗತ ಪುನೀತ್ ರಾಜ್ ಕುಮಾರ್ ರವರ ಪುಣ್ಯ ಸ್ಮರಣೆ ದಿನವಾದ (ಅಕ್ಟೋಬರ್‌ 29) ಮಂಗಳವಾರ ಸ್ಮರಣಾರ್ಥ ಪಟ್ಟಣದ ಗಾಂಧಿ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು

ಕೊಟ್ಟೂರು: ಕರ್ನಾಟಕದ ಜನತೆಗೆ ಕರಾಳ ದಿನವಾದ ಅಕ್ಟೋಬರ್ 29 ರಂದು ಈ ನಾಡಿನ ಜನತೆ ಆ ದಿನ ಎಂದು ಮರೆಯಲು ಸಾಧ್ಯವಿಲ್ಲ. ಅವರು ನಮ್ಮನ್ನಗಲಿ  ಮೂರು ವರ್ಷ ಕಳೆಯುತ್ತಾ ಬಂತು. ಅವರ ಅಭಿಮಾನಿ ಆಗಿರುವ ನಾನು ಅವರನ್ನು ನೆನೆಯದ ದಿನವಿಲ್ಲ ಅದೆಷ್ಟೋ ಅಭಿಮಾನಿಗಳು ಅಪ್ಪು ಅನ್ನು ನೆನೆಸಿಕೊಂಡು ನೋವಿನಲ್ಲಿ ದಿನ ದೂಡುತ್ತಿದ್ದಾರೆ. ಡಾ. ಪುನೀತ್ ರಾಜ ಕುಮಾ‌ರ್ ಅವರು ಮಾಡಿರುವ ಸಮಾಜ ಸೇವೆ ದಾನ, ಧರ್ಮ ಕಾರ್ಯಗಳು ಈಗಿನ ಯುವಕರು ರೂಪಿಸಿಕೊಳ್ಳಬೇಕು ಎಂದು ಕೊಟ್ಟೂರು ತಾಲೂಕು ಅಪ್ಪು ಅಭಿಮಾನಿಗಳ ಸಂಘದ ಅಧ್ಯಕ್ಷರಾದ ರಾಂಪುರ ಪ್ರಕಾಶ್ ಹೇಳಿದರು.

ಪಟ್ಟಣದ ಗಾಂಧಿ ಸರ್ಕಲ್  ಹತ್ತಿರ ದಿ: ಡಾ. ಪುನೀತ್ ರಾಜಕುಮಾರ್ ರವರ 3ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಿಕ್ಷಕರಾಗಿ ಆಗಮಿಸಿ ಎಸ್ ಕೊಟ್ರೇಶಪ್ಪ, ಶಿವುಕುಮಾರ,ಬಿ ಚೆನ್ನಬಸಪ್ಪ,ಕೆ ಎಚ್ ಎಂ ಕಲಾವತಿ ಬಿ ಮುತ್ತೇಶ್ ಚಂದ್ರಕಲಾ ಅಕ್ಕಹಾದೇವಿ ಅಪ್ಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ 200 ಮಕ್ಕಳಿಗೆ ಪುನೀತ್ ರಾಜಕುಮಾರ್ ಭಾವಚಿತ್ರವುಳ್ಳ ಪುಸ್ತಕ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಸಲಾಯಿತು.

ಪ್ರತಿ ವರ್ಷ ಹುಟ್ಟು ಹಬ್ಬ ಹಾಗೂ ಪುಣ್ಯ ಸ್ಮರಣೆ ಈ ಕಾರ್ಯಕ್ರಮಕ್ಕೆ ರೂವಾರಿಯಾಗಿರುವ ಕೊಟ್ಟೂರು ತಾಲೂಕು ಅಪ್ಪು ಅಭಿಮಾನಿಗಳ ಸಂಘದ ಅಧ್ಯಕ್ಷರಾದ ರಾಂಪುರ ಪ್ರಕಾಶ್  ರವರನ್ನು  ಶಿಕ್ಷಕರು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಟ್ಟೂರು ತಾಲೂಕು ಅಪ್ಪು ಅಭಿಮಾನಿಗಳ ಸಂಘದ ಉಪಾಧ್ಯಕ್ಷರಾದ ಕೆಎಂಎಂ ಗುರುಸ್ವಾಮಿ, ಬಿ ಉಚ್ಚಂಗೆಪ್ಪ, ಗಜಾಪುರ ರಾಜು, ಎಚ್ ವಿರೇಶ್, ಎಲ್ ಕೊಟ್ರೇಶ್, ಬಿ ಅಪ್ಪಣ್ಣ, ಜಿ ನಾಗರಾಜ್,ಕೊಟ್ರೇಶ್ ಪೇಟ್ರಿ ,ಜೆ ಸಂತೋಷ್,ಬಸನಾಳು ಕೊಟ್ರೇಶ್,ಹಾಗೂ ಅಪ್ಪು ಅಭಿಮಾನಿಗಳು ಶಾಲಾ ಮಕ್ಕಳು ಇತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago