Breaking News

ಹೊಸಳ್ಳಿ ಗ್ರಾಮದಲ್ಲಿ ಶ್ರೀ ಮರಿಯಮ್ಮದೇವಿ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆ.

Installation of Shri Mariammadevi temple idol in Hosalli village.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಂಗಾವತಿ: ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಇಂದು ನೂತನವಾಗಿ ಶ್ರೀ ಮರಿಯಮ್ಮ ದೇವಿ ದೇವಸ್ಥಾನ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಮರಿಯಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಹೋಮ ಹವನಗಳಿಂದ ವಿಜೃಂಭಣೆಯಿAದ ಜರುಗಿತು.
ಈ ಸಮಾರಂಭದ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಸ್ವಾಮಿಗಳು, ಸುಳೆಕಲ್ ಮಠದ ಸ್ವಾಮಿಗಳು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಮಾಜಿ ಸಚಿವರಾದ ಮಲ್ಲಿಕಾರ್ಜುನ್ ನಾಗಪ್ಪ, ಬಿಜೆಪಿ ಮುಖಂಡರಾದ ವಿರೂಪಾಕ್ಷಪ್ಪ ಸಿಂಗನಾಳ, ದುರುಗಪ್ಪ ಆಗೋಲಿ, ವಾಣಿಜ್ಯೋಧ್ಯಮಿಗಳಾದ ಕೆ ಕಾಳಪ್ಪ, ಚಿಕ್ಕಜಂತಕಲ್ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.
ಈ ದೇವಸ್ಥಾನಕ್ಕೆ ವಿಶೇಷವಾಗಿ ಮಾನ್ಯ ಶಾಸಕರಾದ ಶ್ರೀ ಗಾಲಿ ಜನಾರ್ದನ ರೆಡ್ಡಿಯವರು ವೈಯಕ್ತಿಕವಾಗಿ ೫ ಲಕ್ಷ ರೂಪಾಯಿಗಳನ್ನು ದಾನವಾಗಿ ನೀಡಿರುತ್ತಾರೆ. ದೇವಸ್ಥಾನದ ಸುತ್ತ ಮುತ್ತ ಹಾಗೂ ಮುಂಭಾಗದಲ್ಲಿ ಸಿಸಿ ರಸ್ತೆ ಕಾಮಗಾರಿ ನಿರ್ಮಿಸಲು, ದೇವಸ್ಥಾನ ಸುಂದರೀಕರಣಕ್ಕಾಗಿ ೯.೫೦ ಲಕ್ಷ ಅನುದಾನವನ್ನು ನೀಡಿದ್ದಾರೆ. ಈ ಕಾರ್ಯಕ್ರಮ ಅವರ ನೇತೃತ್ವದಲ್ಲಿಯೇ ನಡೆಯಬೇಕಿತ್ತು, ಆದರೆ ಸಂಡೂರು ಉಪಚುನಾವಣೆ ಹಿನ್ನೆಲೆಯಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಕಾರ್ಯಕ್ರಮಗಳು ಜರುಗಿದವು. ಮುಂದಿನ ದಿನಗಳಲ್ಲಿ ವಿಶೇಷವಾಗಿ ದೇವಸ್ಥಾನ ಸಮಿತಿಯಿಂದ ಶಾಸಕರಿಗೆ ಅಭಿನಂದಿಸಲಾಗುವುದು ಎಂದು ದೇವಸ್ಥಾನದ ಸಮಿತಿಯವರು ತಿಳಿಸಿದ್ದಾರೆ.
ನಂತರ ಹೊಸಳ್ಳಿ ಗ್ರಾಮದ ಯುವಕರಿಗೆ ಸಂಜೆ ರಸಮಂಜರಿ ಕಾರ್ಯಕ್ರಮ ಜರುಗಿತು. ಈ ಸಮಾರಂಭದಲ್ಲಿ ಊರಿನ ಸರ್ವ ಸಮಾಜದ ಮುಖಂಡರು, ಗಣ್ಯರು, ಮಹಿಳೆಯರು ಪಾಲ್ಗೊಂಡಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *