Breaking News

ಕಾಂಗ್ರೆಸ್ ಮಾತ್ರ ಶೋಷಿತರ ರಕ್ಷಣೆ ಮಾಡುತ್ತದೆ : ಜ್ಯೋತಿ ಗೊಂಡಬಾಳ

Only Congress will protect the oppressed: Jyoti Gondbala

ಜಾಹೀರಾತು
IMG 20241109 WA0286

ಕೊಪ್ಪಳ: ಐದು ಪ್ರಮುಖ ಸಮಾಜಮುಖಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಯುವನಿಧಿ, ಅನ್ನಭಾಗ್ಯ ಮತ್ತು ಗೃಹಜ್ಯೋತಿ ಎಂಬ ಗ್ಯಾರಂಟಿಗಳ ಮೂಲಕ ಹಿಂದುಳಿದ, ಬಡವರ ಕಲ್ಯಾಣ ಮತ್ತು ಬದುಕಿಗೆ ಶಕ್ತಿ ನೀಡಿದ ಸಿದ್ದರಾಮಯ್ಯ ಸರಕಾರಕ್ಕೆ ಮತ್ತಷ್ಟು ಶಕ್ತಿ ನೀಡಲು ಅನ್ನಪೂರ್ಣ ತುಕಾರಾಂ ಅವರನ್ನು ಗೆಲ್ಲಿಸಬೇಕು ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಮನವಿ ಮಾಡಿದರು.
ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಅಂತಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ನಾಡು ಕಂಡ ಶ್ರೇಷ್ಠ ಮುಖ್ಯಮಂತ್ರಿಯಲ್ಲಿ ಸಿದ್ದರಾಮಯ್ಯ ಅವರು ಪ್ರಮುಖರು, ಇಲ್ಲಿಯ ನಾಯಕರಾದ ಸಂತೋಷ ಲಾಡ್, ತುಕಾರಾಂ ಅವರಂತಹ ಸಮಾಜ ಸೇವಾ ಮುಖಂಡರುಗಳಿಗೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ಸಹಕಾರ ನೀಡಬೇಕು ಎಂದ ಅವರು, ಇಂದು ಮಹಿಳೆಯರು ನಿಜವಾದ ಸ್ವಾತಂತ್ರ್ಯವನ್ನು ಅನುಭವಿಸುವಂತಾಗಿದೆ, ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ಹೇಳಿದರು.
ಮುಖಂಡರಾದ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ಮಾಡುವ ಬಿಜೆಪಿಗರನ್ನು ರಾಜಕೀಯ ಅಧಿಕಾರದಿಂದ ದೂರ ಇಡದ ಹೊರತು ಸಮಾಜದಲ್ಲಿ ಶಾಂತಿ ಸಿಗದು, ಅಧಿಕಾರ ಮತ್ತು ಆಸ್ತಿ ಮಾಡಲು ಸುಖಾಸುಮ್ಮನೆ ಜನರನ್ನು ಕೆಣಕುವದು, ಮೋಸ ಮಾಡುವದು ಬಿಟ್ಟರೆ ದೇವರ ಹೆಸರಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಅದಕ್ಕಾಗಿ ಕಾಂಗ್ರೆಸ್ ಮಾತ್ರ ಪರಿಹಾರ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸಂತೋಷ ಲಾಡ್, ಸಂಸದ ಇ. ತುಕಾರಾಂ, ಶಾಸಕರಾದ ಕಂಪ್ಲಿ ಗಣೇಶ, ಎಂ.ಪಿ. ಲತಾ ಹರಪನಹಳ್ಳಿ, ಗ್ಯಾರಂಟಿ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್, ಅಭ್ಯರ್ಥಿ ಅನ್ನಪೂರ್ಣ ತುಕಾರಾಂ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಾನಂದ, ಕೊಪ್ಪಳ ಜಿಲ್ಲಾ ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪಂಡಿತ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾ ಇತರರು ಇದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.