Gangavati: Theft in two drug shops
ಗಂಗಾವತಿ: ನಗರದ ಗಣೇಶ ಸರ್ಕಲ್ ನಲ್ಲಿ ಇರುವ ಪಬ್ಲಿಕ್ ಮೆಡಿಕಲ್ ಸ್ಟೋರ್ಸನಲ್ಲಿ ಬುಧವಾರ ರಾತ್ರಿ ಕಳ್ಳತನ ನಡೆದಿದೆ.6 ರಿಂದ 7 ಸಾವಿರ ರೂಪಾಯಿಗಳನ್ನು ಕಳ್ಳರು ದೋಚಿದ್ದಾರೆ ಎಂದು ಅಂಗಡಿಯ ಮಾಲೀಕ ನವೀನ ಚವ್ಹಾಣ ಮಾಹಿತಿ ನೀಡಿದ್ದಾರೆ.
ಇದೇ ಮಾದರಿಯಲ್ಲಿ ಕೋರ್ಟ ಹತ್ತಿರದ ಪಬ್ಲಿಕ್ ಕ್ಲಬ್ ಕಾ೦ಪ್ಲೆಕ್ಸ್ ನಲ್ಲಿರುವ ವಿರೇಶ ಫ಼ಾರ್ಮಸಿಯಲ್ಲಿಯೂ ಸಹ ಗುರುವಾರ ಕಳ್ಳತನ ನಡೆದಿದ್ದು,5-6 ಸಾವಿರ ರೂಪಾಯಿಗಳನ್ನು ಕದ್ದೊಯ್ಯಲಾಗಿದೆ ಎಂದು ಅಂಗಡಿಯ ಮಾಲೀಕ ವಿರೇಶ್ ತಿಳಿಸಿದ್ದಾರೆ.
ಮೇಲ್ಭಾಗದ ಡಾ.ರಾಜು ಅವರ ಆಸ್ಪತ್ರೆ,ಕಂಪ್ಯೂಟರ್ ಅಂಗಡಿ ಮತ್ತು ಕನ್ನಡ ರಕ್ಷಣಾ ವೇದಿಕೆಯ ಕಚೇರಿಯಲ್ಲಿಯೂ ಕಳ್ಳತನ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಅಂಗಡಿಗಳ ಮಾಲೀಕರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಔಷಧ ಅಂಗಡಿಗಳಲ್ಲಿ ಯಾರೂ ಹಣವನ್ನು ಇಟ್ಟು ಕೊಳ್ಳದಿರಲು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಔಷಧ ವ್ಯಾಪಾರಿಗಳಿಗೆ ಸೂಚಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…