Breaking News

ಯುನಿಕ್ ಚಾರಿಟಬಲ್ ಸಮಾಜಮುಖಿ ಸೇವೆ ಶ್ಲಾಘನೀಯ : ಷ ||ಬ್ರ||ಯೋಗಿರಾಜೇಂದ್ರ ಶಿವಾಚಾರ್ಯಸ್ವಾಮಿಗಳು

Unique Charitable Samajmukhi Seva Appreciated : Sh||Br||Yogirajendra Shivacharya Swami

ಜಾಹೀರಾತು

ಕೊಟ್ಟೂರು ನ 24 : ಪಟ್ಟಣದ ಯುನಿಕ್ ಚಾರಿಟಬಲ್ ಟ್ರಸ್ಟ್ ಸಮಾಜಮುಖಿ ಕಾರ್ಯಕ್ರಮವನ್ನು ಷ ||ಬ್ರ||ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಸಮಾಜಕ್ಕೆ ಉಪಯುಕ್ತ ಸೇವಾ ಯೋಜನೆಗಳನ್ನು ರೂಪಿಸಿ ಜನರ ಸೇವೆಗೆ ನೀಡುತ್ತಾರೆ. ಸಂಘಟನೆ ಕಟ್ಟುವ ಮನಸ್ಸು , ಜನಸೇವೆ ಮಾಡುವ ಕನಸ್ಸು ಸಂಘಟಕರಲ್ಲಿರಬೇಕು. ಯುನಿಕ್ ಟ್ರಸ್ಟ್ ನವರು ತಮ್ಮ ದುಡಿಮೆಯ ಉಳಿತಾಯದಲ್ಲಿ ಇಂಥಾ ಸೇವಾ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು

ಸೇವಾ ಟ್ರಸ್ಟ್ ಗಳು ಈ ರೀತಿಯ ಜನ ಉಪಯೋಗಿ ಆರೋಗ್ಯ ಕ್ಯಾಂಪ್ ಮಾಡುತ್ತೀರುವುದು ಮೆಚ್ಚುವಂತದ್ದು, ನೇತ್ರ ತಪಾಸಣೆ ಹಾಗೂ ಉಚಿತ ಶಸ್ತ್ರಚಿಕಿತ್ಸೆ ಕಾರ್ಯಕ್ರಮಗಳಲ್ಲಿ ಮದ್ಯಮವರ್ಗದವರು ಹೆಚ್ಚಾಗಿ ಭಾಗವಹಿಸುತ್ತಿರುವುದು ಮೆಚ್ಚಿಕೊಳ್ಳುವಂತದ್ದು ಇದರ ಜೊತೆ ಬಡವರಿಗೆ ಉಚಿತ ಕನ್ನಡಕ ಕೋಡುವಂತಹ ಯೋಜನೆಯನ್ನು ಮುಂದಿನ ದಿನಗಳಲ್ಲಿ ರೂಪಿಸಬೇಕೆಂದು ಟ್ರಸ್ಟ್ ಸದಸ್ಯರಿಗೆ ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಬದ್ಯಾನಾಯ್ಕ್ ಟ್ರಸ್ಟ್ ಸದಸ್ಯರಿಗೆ ಸಲಹೆ ನೀಡಿದರು.

ಯುನಿಕ್ ಚಾರಿಟಬಲ್ ಟ್ರಸ್ಟ್ ಸದಸ್ಯರ ತಮ್ಮ ದುಡಿಮೆಯ ಉಳಿತಾಯ ಹಣದಲ್ಲಿ ಸಮಾಜ ಸೇವೆ ನಡೆಯುತ್ತಿದೆ. ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕರು ಹಾಗೂ ಟ್ರಸ್ಟ್ ಸದಸ್ಯರ ಅಭಿಲಾಷೆ ಮೇರೆಗೆ ಆರೋಗ್ಯ ಇಲಾಖೆ ವಿಜಯನಗರ ಮತ್ತು ಸಮುದಾಯ ಆರೋಗ್ಯ ಕೊಟ್ಟೂರು ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗದಲ್ಲಿ ಈ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು ಎಂದು ಪ್ರಾಸ್ತಾವಿಕವಾಗಿ ಪಿ.ಎಂ. ಈಶ್ವರಯ್ಯ ಮಾತನಾಡಿದರು.

ಈ ಸಂದರ್ಭದಲ್ಲಿ ಡಾ. ರಾಜೇಶ್, ಡಾ ||ನರಾಯಣಮೂರ್ತಿ, ಟ್ರಸ್ಟ್ ಗಳಾದ ಕೆ.ಅನಿಲ್ ಕುಮಾರ್, ಹನಸಿ ವಿಜಯ, ಸುರೇಶ್ ಎಸ್. ಕೆ.ಎಸ್. ರುದ್ರೇಶ ಇತರರು ಉಪಸ್ಥಿತರಿದ್ದರು.

ಕೊಟ್ಟೂರು,ಹರಪನಹಳ್ಳಿ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಜಗಳೂರು ತಾಲೂಕಿನ ಸುತ್ತಮುತ್ತಲಿನ ಹಳ್ಳಿಯ ಸಾರ್ವಜನಿಕರು ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು 380 ಕ್ಕೂ ಹೆಚ್ಚಿನ ಜನರಿಗೆ ತಪಾಸಣೆ ಕಾರ್ಯನಡೆಯಿತು. 143 ಜನರನ್ನು ಶಸ್ತ್ರಚಿಕಿತ್ಸೆಗಾಗಿ ಶಿವಮೊಗ್ಗ ಪಟ್ಟಣಕ್ಕೆ ಕರೆದುಕೊಂಡು ಹೋಗಲಾಗುವುದು ಎಂದು ಡಾ || ವೈಷ್ಣವಿ ನೇತ್ರ ತಜ್ಞರು ತಿಳಿಸಿದರು. ಶಂಕರ್ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ಶಿವಪ್ರಸಾದ್ ಕಾಂಪ್ ನ ಸಂಪೂರ್ಣ ಜವಾಬ್ದಾರಿ ನಿರ್ವಹಿಸಿದರು. ನವಿನ್ ಕುಮಾರ್ ಚಟ್ರಿಕಿ ನಿರೂಪಿಸಿದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *