ಕಲ್ಯಾಣಸಿರಿ ವಿಶೇಷ

ತಾಲೂಕಿನಲ್ಲಿ ನಾಮ ಫಲಕಗಳಿಲ್ಲದೇ ನಡೆಯುತ್ತಿರುವ ಕಾಮಗಾರಿಗಳು:ಆರೋಪ

Works going on without name plates in Allegation

ಕೇಲವೊಂದು ಕಡೆಗಳಲ್ಲಿ ಕಳಪೆ ಕಾಮಗಾರಿ ಎಂದು ಗುತ್ತಿಗೆದಾರರಿಗೆ ಕಿರುಕುಳ,,,

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಯಲಬುರ್ಗಾ, ಕುಕನೂರು ಅವಳಿ ತಾಲೂಕಿನಲ್ಲಿ ಹಲವಾರು ಸರಕಾರಿ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು ಅವುಗಳ ಮಾಹಿತಿ ಕುರಿತು ಯಾವುದೇ ನಾಮ ಫಲಕ ಅಳವಡಿಸದೇ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ ಎಂದು ಪ್ರಜ್ಞಾವಂತ ನಾಗರಿಕರು ಆರೋಪಿಸಿದ್ದಾರೆ.

ಕಾಮಗಾರಿಯನ್ನು ಗುತ್ತಿಗೆ ಪಡೆದ ಇಲಾಖೆಯಾಗಲಿ ಅಥವಾ ಹೊರ ಗುತ್ತಿಗೆದಾರರಾಗಲಿ ಇದು ಯಾವ ಕಾಮಗಾರಿ, ಈ ಕಾಮಗಾರಿಯು ಯಾವ ಅನುದಾನದಲ್ಲಿ ಹಾಗೂ ಎಷ್ಟು ಮೊತ್ತದಲ್ಲಿ, ಎಷ್ಟು ವರ್ಷ ಇದರ ನಿರ್ವಹಣೆ ಹೊಣೆ ಇರುತ್ತದೆ ಎನ್ನುವ ಕುರಿತು ನಾಮ ಫಲಕ ಅಳವಡಿಸದೇ ತಮಗೆ ಬೇಕಾದ ರೀತಿಯಲ್ಲಿ ಕಾಮಗಾರಿ ಮಾಡಿ ಮುಗಿಸಲು ಮುಂದಾಗಿದ್ದಾರೆ ಎಂದು ಸಾರ್ವಜನಿಕ ವಲಯದ ಮಾತಾಗಿದೆ.

ಈ ಕುರಿತು ಹೆಸರು ಹೇಳಲು ಇಚ್ಚಿಸದ ವ್ಯಕ್ತಿಯೊಬ್ಬರೂ ಪತ್ರಿಕೆಯೊಂದಿಗೆ ಮಾತನಾಡಿ ಕಾಮಗಾರಿ ನಡೆಯುವಲ್ಲಿಗೆ ಕೇಲವೊಂದಿಷ್ಟು ಜನ ತೆರಳಿ ಮುಖಂಡರು ಎಂದು ಹೇಳಿಕೊಂಡು ಗುತ್ತಿಗೆದಾರರಿಗೆ ಹೆದರಿಸಿ, ಬೆದರಿಸಿ ವಸೂಲಿಗೆ ನಿಂತಿದ್ದಾರೆ. ಅವರು ಬೆದರಿಸಿ ತೆಗೆದುಕೊಂಡು ಹೋಗುತ್ತಿರುವ ಸಾಮಗ್ರಿಗಳ ಕುರಿತು ಮಾಹಿತಿ ಇದೆ. ಅದನ್ನು ಸದ್ಯದಲ್ಲಿಯೇ ಬಹಿರಂಗ ಪಡಿಸುತ್ತೇವೆ. ಅದು ಸ್ಪಷ್ಟ ಮಾಹಿತಿಯೊಂದಿಗೆ ಮಾಧ್ಯಮದ ಮುಂದೆ ಹಿಡಿಯುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಸರಕಾರಿ ಕಾಮಗಾರಿಗಳ ಕುರಿತು ನಾಮ ಫಲಕ ಅಳವಡಿಸಿ ಗುಣ ಮಟ್ಟದ ಕಾಮಗಾರಿ ಮಾಡುವ ಮೂಲಕ ಯಾರ ಯಾವ ಒತ್ತಡಕ್ಕೂ ಮಣಿಯದೇ ಉತ್ತಮ ಗುಣ ಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರು ಮುಂದಾಗಬೇಕು, ಒಂದು ವೇಳೆ ಯಾರಾದರೂ ಬೆದರಿಕೆ ನೀಡಿದಲ್ಲಿ ಅವರ ಮೇಲೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಗುತ್ತಿಗೆದಾರರು ಮುಂದಾಗಬೇಕು ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

5 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

5 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago