Breaking News

ಸಾರ್ವಜನಿಕರು ವಾರ್ಡ್ ಕ್ಯಾಂಪ್ ಗೆ ಆಗಮಿಸಿ ಆನ್‌ಲೈನ್ ತಂತ್ರಾಂಶದ ಮೂಲಕ ನಮೂನೆ-3ನ್ನು ಪಡೆದುಕೊಳ್ಳಿ : ಆಯುಕ್ತ ವೀರುಪಾಕ್ಷಮೂರ್ತಿ,,

Public should arrive at ward camp and collect form-3 through online software : Commissioner Veerupakshamurthy.

IMG 20241128 WA0188


ಗಂಗಾವತಿ : ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಮಾನ್ಯ ಘನ ಸರಕಾರದ ಸುತ್ತೋಲೆ ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ನಗರದ 30 ಸಾವಿರ ಆಸ್ತಿಗಳಿದ್ದು ಅವುಗಳಿಗೆ ಸಂಬಂಧಿಸಿದಂತೆ ನಮೂನೆ – 3 ನೀಡಲು ನಗರದ ಪ್ರತಿಯೊಂದು ವಾರ್ಡ್ ಗಳಲ್ಲಿ ಒಂದೊಂದು ದಿನ ಕ್ಯಾಂಪ್ ಆಯೋಜಿಸಲಾಗಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಲು ಮುಂದಾಗಬೇಕು ಎಂದು ನಗರಸಭೆ ಆಯುಕ್ತರಾದ ವೀರುಪಾಕ್ಷಮೂರ್ತಿ ಹೇಳಿದರು.

ಅವರು ಬುಧವಾರದಂದು ನಗರದ ದುರ್ಗಮ್ಮನ ಹಳ್ಳದ ಬಳಿ ಇರುವ ವೀರಣ್ಣ ದೇವಸ್ಥಾನದಲ್ಲಿ ನಮೂನೆ -03 ವಿತರಣೆ ಕ್ಯಾಂಪ್ ನಲ್ಲಿ ಮಾತನಾಡಿ ಇ-ಆಸ್ತಿ ತಂತ್ರಾಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸಾರ್ವಜನಿಕರಿಂದ ಆಸ್ತಿ ಕಣಜ ತಂತ್ರಾಂಶದಲ್ಲಿ ಅವಶ್ಯವಿರುವ ದಾಖಲೆಗಳ ಪ್ರತಿಗಳನ್ನು ಪಡೆದು ಅದೇ ದಿನದಂದು ಅರ್ಹ ಆಸ್ತಿಗಳಿಗೆ ನಮೂನೆ-3ನ್ನು ವಿತರಿಸಲು ನಗರದ ಎಲ್ಲಾ ವಾರ್ಡ್ ಗಳಲ್ಲಿ ಕ್ಯಾಂಪ್ ಗಳನ್ನು ಒಂದೊಂದು ದಿವಸ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಆಸ್ತಿ ತೆರಿಗೆ ಪಾವತಿದಾರರಿಗೆ ಈ ಸಂಬಂಧ ಸಾರ್ವಜನಿಕ ಮಾಹಿತಿ ನೀಡಿರುವ ಅವರು ಪ್ರತಿಯೊಂದು ವಾರ್ಡ್ ಗಳ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಕ್ಯಾಂಪ್ ನಲ್ಲಿ ಸಾರ್ವಜನಿಕರು ಭೇಟಿ ನೀಡಿ ತಮ್ಮ ತಮ್ಮ ಆಸ್ತಿಗಳ ಅಧಿಕೃತ ದಾಖಲಾತಿಗಳನ್ನು ಅಲ್ಲಿ ನಿಯೋಜಿಸಿರುವ ಸಿಬ್ಬಂದಿ, ಅಧಿಕಾರಿಗಳಿಗೆ ನೀಡಿ ಆನ್‌ಲೈನ್ ತಂತ್ರಾಂಶದ ಮೂಲಕ ನಮೂನೆ-3ನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಆರ್.ಐ, ಆರ್ ಒ, ಕರವಸೂಲಿಗಾರರು, ಬ್ಯಾಂಕ್ ಸಿಬ್ಬಂದಿಗಳು, ಡಾಟಾ ಎಂಟ್ರಿ ಆಫರೆಟರ್, ಕೇಸ್ ವರ್ಕರ್, ಸೇರಿದಂತೆ ನೂರಾರು ಸಾರ್ವಜನಿಕರು ಇನ್ನಿತರರು ಇದ್ದರು.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.