Breaking News

ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಿ,ಶಿರಸ್ತೇದಾರ ರವಿಕುಮಾರ್ ನಾಯಕವಾಡಿ ಸಲಹೆ

Include the name in the voter list, Chief Ravikumar suggested

ಜಾಹೀರಾತು
IMG 20241203 WA0344 Scaled

ಜಿಎಚ್ ಎನ್ ಕಾಲೇಜಿನಲ್ಲಿ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ

ಗಂಗಾವತಿ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳದ ಯುವ ಮತದಾರರು ಡಿ.14ರೊಳಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವಂತೆ ತಹಸಿಲ್ ಕಚೇರಿಯ ಚುನಾವಣೆ ವಿಭಾಗದ ಶಿರಸ್ತೇದಾರರಾದ ರವಿಕುಮಾರ್ ನಾಯಕವಾಡಿ ಅವರು ಸಲಹೆ ನೀಡಿದರು.

ನಗರದ ಜಿಎಚ್ ಎನ್ ಕಾಲೇಜಿನಲ್ಲಿ ಕಾಲೇಜು ಆಡಳಿತ ಮಂಡಳಿ, ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮಂಗಳವಾರ ಆಯೊಜಿಸಿದ್ದ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.

ನಮೂನೆ- 6 ಅರ್ಜಿಯೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಎಲ್ಲ ಯುವ ಮತದಾರರು ಕಡ್ಡಾಯವಾಗಿ ಮತದಾರ ಪಟ್ಟಿಯಲ್ಲಿ ಸೇರ್ಪಡೆ ಆಗಬೇಕು. ಜೊತೆಗೆ ಕುಟುಂಬ ಸದಸ್ಯರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲನೆ ಮಾಡಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ನೋಂದಣಿ ಆಗದ ಅರ್ಹ ಮತದಾರರರು ಕೂಡಲೇ ಸೇರ್ಪಡೆ ಮಾಡಿಕೊಳ್ಳುವಂತೆ ತಿಳಿಸಿದರು.

ವೋಟರ್ ಹೆಲ್ಪ್ ಲೈನ್ ಆ್ಯಪ್ ಮುಖಂತಾರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ತಿದ್ದುಪಡಿ, ಗುರುತಿನ ಚೀಟಿ ತಿದ್ದುಪಡಿ ಕುರಿತು ಮಾಹಿತಿ ನೀಡಿದರು.

ಜಿಎಚ್ ಎನ್ ಕಾಲೇಜು ಪ್ರಾಚಾರ್ಯರಾದ ಜಿ.ಬಸವರಾಜ ಅಯೋಧ್ಯ ಅವರು ಪ್ರಸ್ತಾವಿಕವಾಗಿ ಮಾತನಾಡಿ, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನದ ಹಕ್ಕು ಪಡೆದುಕೊಳ್ಳಬೇಕು. ಯಾರು ಕೂಡ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು ಎಂದರು.

ತಾ.ಪಂ. ತಾಲೂಕು ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಉಪನ್ಯಾಸಕರಾದ ಎಸ್ .ಕೆ. ಸೋಮನಗೌಡ, ಜಗದೀಶ, ಮಾರುತಿ, ನೀಲಮ್ಮ ಪಾಟೀಲ್ , ಲೀಲಾವತಿ, ಯರಿಸ್ವಾಮಿ, ಸಿಬ್ಬಂದಿ ಅಬ್ದುಲ್ ಸೇರಿ ಇತರರು ಇದ್ದರು.

About Mallikarjun

Check Also

screenshot 2025 10 16 19 20 27 64 e307a3f9df9f380ebaf106e1dc980bb6.jpg

ಸರ್ವೋದಯ ಪಕ್ಷದ ಕಾರ್ಯಾಧ್ಯಕ್ಷರಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇಮಕ

MLA Darshan Puttannaiah appointed as Sarvodaya Party working president ಬೆಂಗಳೂರು,ಅ.೧೬;ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಾಗೂ ಮೈಸೂರಿನ ಕರುಣಾಕರ.ಬಿ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.