Breaking News

ಹನುಮ ಮಾಲೆ: ಮಾಂಸಾಹಾರ ಮಾರಾಟ ಮಾಡದಂತೆ ಒತ್ತಾಯ ಜೈನ್ ಸಮಾಜದ ಯುವ ಘಟಕ ಒತ್ತಾಯಿಸಿದೆ.

Hanuma Male: Jain Samaj youth unit has demanded not to sell meat.

ಜಾಹೀರಾತು
Screenshot 2024 12 05 18 56 40 27 E307a3f9df9f380ebaf106e1dc980bb6

ಗಂಗಾವತಿ,೦೫: ಹನುಮ ಮಾಲೆ ಅಭಿಯಾನದ ಅಂಗವಾಗಿ ತಾಲ್ಲೂಕಿನ ಪ್ರಮುಖ ಧಾರ್ಮಿಕ ತಾಣ ಚಿಕ್ಕರಾಂಪೂರದ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯದಿಂದ ಲಕ್ಷಾಂತರ ಭಕ್ತರು ಡಿ.೧೩ರಂದು ಬೆಟ್ಟಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಸುತ್ತಲಿನ ಪ್ರದೇಶದಲ್ಲಿ ಮಾಂಸಾಹಾರ ಮಾರಾಟ ಮಾಡದಂತೆ ಜಿಲ್ಲಾಡಳಿತ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಮಹಾವೀರ ಜೈನ್ ಸಮಾಜದ ಯುವ ಘಟಕ ಒತ್ತಾಯಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಜೈನ್ ಸಮಾಜದ ಯುವ ಘಟಕದ ಮುಖಂಡ ದೀಪಕ್ ಬಾಂಠಿಯಾ, ಡಿ.೧೩ರಂದು ಹನುಮ ಮಾಲೆ ಅಭಿಯಾನ ನಡೆಯಲಿದೆ. ಈ ಸಂದರ್ಭದಲ್ಲಿ ಅಂಜನಾದ್ರಿ ಬೆಟ್ಟದ ಸುತ್ತಲಿನ ಪರಿಸರದಲ್ಲಿ ಒಟ್ಟು ಮೂರು ದಿನಗಳ ಕಾಲ ಯಾವುದೇ ಮಾಂಸಾಹಾರ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಮುಖ್ಯವಾಗಿ ಅಂಜನಾದ್ರಿ ಬೆಟ್ಟದ ಸಮೀಪ ಇರುವ ತಳ್ಳು’ ಬಂಡಿಗಳಲ್ಲಿ ಮೊಟ್ಟೆ, ಮಾಂಸಾಹಾರ, ಸುತ್ತಲಿನ ರೆಸಾರ್ಟ್‌ಗಳಲ್ಲಿ ಮದ್ಯ, ಮಾಂಸಾಹಾರ ಮಾರಾಟ ಮಾಡುವುದನ್ನು ತಡೆಯುವ ಮೂಲಕ ಧಾ ರ್ಮಿಕ ತಾಣದ ಪಾವಿತ್ರತೆ ಕಾಪಾಡಲು ಜಿಲ್ಲಾಧಿಕಾರಿಗಳು ಆದ್ಯತೆ ನೀಡಬೇಕು.

ಮುಖ್ಯವಾಗಿ ಡಿ.೧೩ರಂದು ಹನುಮ ಮಾಲೆ ಅಭಿಯಾನ ನಡೆಯಲಿದ್ದು, ಇದರ ಭಾಗವಾಗಿ ಮುಂಚಿತ ದಿನ ಅಂದರೆ ೧೨ ಮತ್ತು ಅಭಿಯಾನದ ಬಳಿಕದ ದಿನ ಅಂದರೆ ಡಿ.೨೪ರಂದು ಒಟ್ಟು ಮೂರು ದಿ’ ನಗಳ ಕಾಲ ಮಾಂಸಾಹಾರ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಬೇಕು.

ಈ ಮೂಲಕ ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತರ ಧಾರ್ಮಿಕ ನಂಬಿಕೆ. ಶ್ರದ್ಧಾ ಕಾರ್ಯಕ್ಕೆ ಭಂಗ ಉಂಟಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಮದ್ಯ ಮಾರಾಟ ನಿಷೇಧ ಮಾಡಿದಂತೆ ಮಾಂಸ ಮಾರಾಟವನ್ನು ಪ್ರತಿವರ್ಷ ಜಿಲ್ಲಾಡಳಿತ ನಿಷೇಧಿಸಬೇಕು ಎಂದು ಜೈನ್ ಸಮಾಜದ ಯುವ ಘಟಕದ ಸಂಚಾಲಕ ದೀಪಕ್ ಬಾಂಠಿಯಾ ಒತ್ತಾಯಿಸಿದ್ದಾರೆ.

About Mallikarjun

Check Also

unnamed

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ ಮಾಡಿ

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.