Complete the work of shelter homes and get grant: Headmaster Nagesh
ವರದಿ : ಪಂಚಯ್ಯ ಹಿರೇಮಠ.
ಕಲ್ಯಾಣಸಿರಿ ವರದಿ.
ಕೊಪ್ಪಳ : ಯಲಬುರ್ಗಾ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳು 2015-16 ರಿಂದ 2021-22 ನೇ ಸಾಲಿನ ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ವಸತಿ ಯೋಜನೆಯಲ್ಲಿ ಫಲಾನುಭವಿಗಳಾದವರು ಕೂಡಲೇ ತಮ್ಮ ಮನೆಯ ಕಾಮಗಾರಿಗಳನ್ನ ಪೂರ್ಣಗೋಳಿಸಬೇಕೆಂದು ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು.
ಈ ಕುರಿತು ನಮ್ಮ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಇಗಾಗಲೇ ಮನೆಗಳನ್ನ ಅರ್ದಕ್ಕೆ ನಿಲ್ಲಿಸಿದವರಿಗೆ ಹಾಗೂ ಕಟ್ಟಡ ಕಾಮಗಾರಿಯನ್ನ ಪ್ರಾರಂಭಿಸದೆ ಇರುವಂತಹ ಫಲಾನುಭವಿಗಳಿಗೆ ನಮ್ಮ ಕಾರ್ಯಾಲಯದಿಂದ ಹಲವಾರು ಭಾರಿ ನಮ್ಮ ಸಿಬ್ಬಂದಿ ಮನೆ ಬೇಟಿ ಮಾಡಿ ಮಾಹಿತಿ ನಿಡಿದ್ದು ಹಾಗೂ ಅಧಿಕೃತವಾಗಿ ನೋಟಿಸ್ ನೀಡಲಾಗಿದ್ದರು ಸಹಿತ ಹಲವಾರು ಫಲಾನುಭವಿಗಳು ಮನೆ ನಿರ್ಮಿಸಿಕೊಳ್ಳುತ್ತಿಲ್ಲಾ ಡಿಸೆಂಬರ್ 12ರ ಒಳಗೆ ಮನೆ ನಿರ್ಮಿಸಿಕೊಂಡು ನಮ್ಮ ಗಮನಕ್ಕೆ ತಂದಲ್ಲಿ ಜಿಪಿಎಸ್ ಅಳವಡಿಸಿ ಅನುಧಾನ ಬಿಡುಗಡೆಗೆ ಅನುಕೂಲ ಕಲ್ಪಿಸಲಾಗುವದು.
ಒಂದು ವೇಳೆ ನಮ್ಮ ಮಾಹಿತಿಯನ್ನು ಹಾಗೂ ನೋಟಿಸನ್ನು ಲೆಕ್ಕಿಸದೆ ತಮ್ಮ ಮನೆಯ ಕಾಮಗಾರಿಯನ್ನು ಪ್ರಾರಂಬಿಸದೆ ನಿರ್ಲಕ್ಷ್ಯ ವಹಿಸಿದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಈ ಮೊದಲು ನೀಡಿದ ಹಲವು ಕಂತಿನ ಹಣವನ್ನು ಸರಕಾರಕ್ಕೆ ಹಿಂತಿರುಗಿಸಲು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಆದೇಶದಂತೆ ಕ್ರಮವಹಿಸಲಾಗುವದು ಆದ್ದರಿಂದ ಫಲಾನುಭವಿಗಳು ಆದಷ್ಟು ಶೀಘ್ರದಲ್ಲೇ ತಮ್ಮ ಮನೆಯ ಕಾಮಗಾರಿ ಪ್ರಾರಂಬಿಸಿ ಅನುಧಾನ ಪಡೆಯಿರಿ ಎಂದರು.
ಈ ಸಂದರ್ಭದಲ್ಲಿ ವಸತಿ ಶಾಖೆ ಸಿಬ್ಬಂದಿ ರವಿ ಯಕ್ಲಾಸಪೂರ ಹಾಜರಿದ್ದರು.
124th day of anti-Baldota factory sit-in is a success; MLAs' move welcomed ೧೨೪ನೇ ದಿನದ ಬಲ್ಡೋಟ…
ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…
https://kalyanasiri.in/2026/03/02/influential-people-planning-to-encroach-on-government-cattle-ranch-villagers-oppose/
https://kalyanasiri.in/2026/03/03/no-matter-how-many-births-you-take-you-cannot-repay-your-fathers-debt/
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…