Answer given by Chief Minister Siddaramaiah in Belgaum session regarding 2A reservation demand of Panchamasali community
ಕೃಪೆ: ಸಿದ್ದರಾಮಯ್ಯ ಅವರ ಫೇಸ್ ಬುಕ್
ಪಂಚಮಸಾಲಿ
ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು.
ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ.
ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂಮರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುತ್ತೇನೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…