ಕಲ್ಯಾಣಸಿರಿ ವಿಶೇಷ

ಚಂಪಾ ಸೃಷ್ಟಿ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ಕಾರ್ತಿಕೋತ್ಸವ

Kartikotsava to Goddess Sri Kannika Parameshwari for the creation of Champa

ಗಂಗಾವತಿ: ನಗರದ ಹಿರೇಜಂತಕಲ್, ವಿರುಪಾಪುರ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ಕಾರ್ತಿಕ ಮಾಸದ ಕೊನೆಯ ದಿನವಾದ ಶನಿವಾರದಂದು ಚಂಪಾಸೃಷ್ಟಿ (ಶ್ರೀ ಸುಬ್ರಹ್ಮಣ್ಯೇಶ್ವರ ಆಚರಣೆ) ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಗೆ ದೀಪೋತ್ಸವ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ, ಭಕ್ತಿಯಿಂದ ಜರುಗಿತು.
ಇದಕ್ಕೂ ಪೂರ್ವದಲ್ಲಿ ಅಮ್ಮನವರಿಗೆ ವಿಶೇಷ ಅಲಂಕಾರ, ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರು ಸಾಂಗತವಾಗಿ ನಡೆಸಿಕೊಟ್ಟರು. ಬಳಿಕ ವಾಸವಿ ಮಹಿಳಾ ಮಂಡಳಿಯ ಸದಸ್ಯರಿಂದ ಭಜನೆ, ಲಲಿತ ಸಹಸ್ರಪಾರಾಯಣ ಪಠಣ, ಇತರೆ ಕಾರ್ಯಕ್ರಮಗಳು ಜರುಗಿದವು. ಬಳಿಕ ಸಮಾಜದ ಅಧ್ಯಕ್ಷ ನಾಗರಾಜ ದರೋಜಿ ದಂಪತಿಗಳು ಸೇರಿದಂತೆ ಟ್ರಸ್ಟಿ ಸದಸ್ಯರ ನೇತೃತ್ವದಲ್ಲಿ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು.
ಬಳಿಕ ಅಧ್ಯಕ್ಷ ನಾಗರಾಜ ದರೋಜಿ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ. ಚಂಪಾ ಸೃಷ್ಟಿಯ ೧೬ನೇ ವರ್ಷದ ಕಾರ್ತಿಕ ದೀಪೋತ್ಸವ ಇದಾಗಿದ್ದು, ಸಮಾಜಬಾಂಧವರ ಎಲ್ಲರ ಸಹಕಾರದ ಮೇರೆಗೆ ಯಶಸ್ವಿಗೊಂಡಿದೆ. ಜ್ಯೋತಿ ಪರಂ ಬ್ರಹ್ಮ ಎನ್ನುವಂತೆ ಕುಲದೇವತೆ ಅಮ್ಮನವರು ಸರ್ವರಿಗೂ ಸುಖ ಶಾಂತಿ ಸಮೃದ್ಧಿ ಕರುಣಿಸಲಿ ಎಂದು ಸಂಕಲ್ಪಿಸಿಕೊAಡಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಡಿ. ಮಲ್ಲಿಕಾರ್ಜುನ, ಗೋಪಾಲ ಶೆಟ್ಟಿ ಆನೆಗುಂದಿ, ಡಿ. ವೆಂಕಟೇಶ್, ರುಕ್ಮಿಣಿಬಾಯಿ ದಮ್ಮೂರು, ಉಷಾ ಸಿರಿಗೇರಿ, ರೇಖಾ ಜಿ., ವಾಸವಿ ಯುವಜನ ಸಂಘದ ಯುವಕರು ಹಾಗೂ ಮಹಿಳಾ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

6 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago