ಕಲ್ಯಾಣಸಿರಿ ವಿಶೇಷ

ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ

Nirmala Tungabhadra campaign poster release


ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ ಹಂಚಿಕೊAಡರು.
ಈ ಸಂದರ್ಭದಲ್ಲಿ ಹಿರಿಯ ವೈದ್ಯರು, ಪರಿಸರವಾದಿಗಳಾದ ಡಾ|| ಎ. ಸೋಮರಾಜು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ|| ಜಿ. ಚಂದ್ರಪ್ಪ ಅವರು ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿದರು.
ಗಂಗಾವತಿಯ ಪ್ರಮುಖ ಸಂಸ್ಥೆಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಸುಬ್ರಹ್ಮಣ್ಯೇಶ್ವರರಾವ್, ರೋಟರಿ ಕ್ಲಬ್ ಅಧ್ಯಕ್ಷರಾದ ಟಿ. ಆಂಜನೇಯ, ಸ್ನೇಹಬಳಗದ ಅಧ್ಯಕ್ಷರಾದ ಶ್ಯಾಮಮೂರ್ತಿ ಐಲಿ, ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ನೂಲ್ವಿ, ದಲಿತ ಸಾಹಿತ್ಯ ಪರಿಷತ್ತಿನ ಛತ್ರಪ್ಪ ತಂಬೂರಿ, ಶರಣ ಸಾಹಿತ್ಯ ಪರಿಷತ್ತಿನ ಜೆ. ನಾಗರಾಜ, ಜೈನ ಸಮಾಜದ ಉಗಮರಾಜ ಬಂಬ್, ಆಯುಷ್ ಅಧ್ಯಕ್ಷರಾದ ಡಾ|| ಬಸವರಾಜ, ಕಾರ್ಯದರ್ಶಿ ಡಾ|| ಸುನೀಲ್ ಅರಳಿ, ಬಸವಕೇಂದ್ರದ ಅಧ್ಯಕ್ಷರಾದ ಕೆ. ಬಸವರಾಜ, ಸೌಹಾರ್ಧ ಸಹಕಾರಿ ಒಕ್ಕೂಟದ ಸುಧಾಕರ, ಸತೀಶ್, ಕ್ಲೀನ್ ಗ್ರೀನ್ ಶ್ರೀರಾಮನಗರದ ಎಂ.ಡಿ ರಫಿ, ಮೌಲಾಸಾಬ್, ನೌಕರ ಸಂಘದ ಅಧ್ಯಕ್ಷರಾದ ಶಿವಶಂಕರ ಹಾಗೂ ನಿವೃತ್ತ ನೌಕರರ ಸಂಘದ ಶರಭಣ್ಣ, ಅಲೆಮಾರಿ ಸಮುದಾಯದ ಅಧ್ಯಕ್ಷ ಆರ್. ಕೃಷ್ಣ, ಭಾರತೀಯ ಪ್ರಜಾಸೇನೆಯ ಬಸವರಾಜ ಮ್ಯಾಗಳಮನಿ, ಭಾರತೀಯ ವಿಕಾಸ ಪರಿಷತ್ ಅಧ್ಯಕ್ಷರಾದ ಜಂಬಣ್ಣ ಐಲಿ, ಸೇಂಟ್ ಫಾಲ್ಸ್ ಶಿಕ್ಷಣ ಸಂಸ್ಥೆಯ ಸರ್ವೇಶ್ ವಸ್ತçದ್, ಶರಣ ಕಲಾಬಳಗದ ರಮೇಶ ಗಬ್ಬೂರು, ಹೀಗೆ ೩೫ ಕ್ಕಿಂತ ಹೆಚ್ಚಿನ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಡಾ|| ಶಿವಕುಮಾರ ಮಾಲಿಪಾಟೀಲ್ ಸ್ವಾಗತಿಸಿದರು. ಪವನಕುಮಾರ ಗುಂಡೂರು ವಂದನಾರ್ಪಣೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರಾದ ಮಂಜುನಾಥ ಕಟ್ಟಿಮನಿ, ವಿನಯ ಪಾಟೀಲ್ ಹಾಗೂ ಗಂಗಾವತಿ ಚಾರಣ ಬಳಗದ ಮಂಜುನಾಥ ಗುಡ್ಲಾನೂರು, ಮೈಲಾರಪ್ಪ ಬೂದಿಹಾಳ. ಉಲ್ಲಾಸ್, ಕೆ.ವೈ.ಟಿ.ಸಿ ಪ್ರಮುಖರಾದ ಅರ್ಜುನ್, ಸೌಮ್ಯ, ಪಂಪಾಪತಿ, ಪ್ರಕಾಶ, ಗ್ರಾಮೀಣ ಭಾರತೀಯ ರೆಡಿಯೋ ದ ರಾಘವೇಂದ್ರ ತೂನಾ ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

1 hour ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

1 hour ago

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

2 hours ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

3 hours ago