Breaking News

ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ| ಮಾಜಿ‌ಸಿಎಂಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ

Tribute meeting at Congress office Former CM S.M.Krishna passes away

ಜಾಹೀರಾತು

ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿ, ಸಂತಾಪ ಸೂಚಿಸಲಾಯಿತು.

ಬ್ಲಾಕ್‌ ಕಾಂಗ್ರೆಸ್ ಕಾರ್ಯಧ್ಯಕ್ಷ
ಕರಿಬಸಪ್ಪ ನಿಡಗುಂದಿ ಮಾತನಾಡಿ, ರಾಜ್ಯ ಹಾಗೂ ದೇಶದ ಕಂಡ ಅತ್ಯುತ್ತಮ ನಾಯಕರಾಗಿ, ನಾಡಿನ ಸಿಎಂ ಆಗಿ ಉತ್ತಮ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕ ಹಾಗೂ ಕೊಪ್ಪಳ ‌ಜಿಲ್ಲೆಗೆ ಕೃಷ್ಣ ರವರ ಕೊಡುಗೆ ಅಪಾರವಿದೆ. ಇಂದು ಅವರ ಅಗಲಿಕೆ ಬಹಳಷ್ಟು ನೋವು ತಂದಿದೆ ಎಂದರು.

ಬೆಂಗಳೂರನಲ್ಲಿ ಐಟಿ-ಬಿಟಿ ಸ್ಥಾಪಿಸಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕೇಂದ್ರ ಸಚಿವರಾಗಿ, ರಾಜ್ಯಪಾಲ, ಮುಖ್ಯಮಂತ್ರಿಗಳಾಗಿ ದಕ್ಷ ಆಡಳಿತ ನಡೆಸಿ ರಾಜ್ಯದ ಜನತೆಗೆ ಕೊಡುಗೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷ ಡಾ.ಶಿವನಗೌಡ ದಾನರೆಡ್ಡಿ,ಮುಖಂಡರಾದ ಶರಣಪ್ಪ ಗಾಂಜಿ, ಆನಂದ ಉಳ್ಳಾಗಡ್ಡಿ, ಮಲ್ಲು ಜಕ್ಕಲಿ, ಸಿಎಂ ಈಶ್ವರ ಅಟಮಾಳಗಿ, ಮಲ್ಲೇಶಗೌಡ ಪಾಟೀಲ, ಹುಲಗಪ್ಪ ಬಂಡಿವಡ್ಡರ್, ಹನುಮಂತ ಭಜಂತ್ರಿ, ಸಂತೋಷ ಬೆಣಕಲ್ಲ, ವಂಸತರಾವ ಕುಲಕರ್ಣಿ, ಎಂ.ಎಫ್.ನದಾಫ್, ಪುನೀತ್ ಕೊಪ್ಪಳ, ಮೌನೇಶ ಬಡಿಗೇರ್, ರಾಜ ಹಡಪದ, ಪರಶುರಾಮ ಸಂಗನಾಳ , ಖಾಜಾವಲಿ ಗಡಾದ ಇದ್ದರು.

About Mallikarjun

Check Also

ಮಂತ್ರಾಲಯದಿಂದ ವಾಪಸ್ ಬರುವಾಗ ಆಂಧ್ರದ ಕರ್ನೂಲ್ ಬಳಿ ಭೀಕರ ಅಪಘಾತ ಮೂವರ ದುರ್ಮರಣ.

Three people died in a horrific accident near Kurnool, Andhra Pradesh, while returning from Mantralaya. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.